ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡ, ಹೆಚ್ಡಿಕೆ ಅಪ್ಪಟ ಅಭಿಮಾನಿಯ ಬರ್ಬರ ಹತ್ಯೆ.!
ಚಿಕ್ಕಬಳ್ಳಾಪುರದಲ್ಲಿ ಲಾಂಗ್ನಿಂದ ಕೊಚ್ಚಿ ಜೆಡಿಎಸ್ ಮುಖಂಡನ ಬರ್ಬರವಾಗಿ ಹತ್ಯೆಮಾಡಲಾಗಿದೆ. ದುಷ್ಕರ್ಮಿಗಳು ಬೈಕ್ ಅಡ್ಡಗಟ್ಟಿ ಜೆಡಿಎಸ್ ಮುಖಂಡನನ್ನು ನಡು ರಸ್ತೆಯಲ್ಲೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗೇಟ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮತ್ತು ಜಿಲ್ಲಾ ವರಿಷ್ಠ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ತಂಡಗಳನ್ನು ರಚಿಸಿಕೊಂಡು ಹಂತಕರನ್ನು ಹೆಡೆಮುರಿಕಟ್ಟಲು ಕಾರ್ಯಚರಣೆಗೆ ಇಳಿದಿದ್ದಾರೆ…. ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡ, ಹೆಚ್ಡಿಕೆ ಅಪ್ಪಟ ಅಭಿಮಾನಿಯ ಬರ್ಬರ…