ಚಿಕ್ಕಬಳ್ಳಾಪುರದಲ್ಲಿ ಲಾಂಗ್ನಿಂದ ಕೊಚ್ಚಿ ಜೆಡಿಎಸ್ ಮುಖಂಡನ ಬರ್ಬರವಾಗಿ ಹತ್ಯೆಮಾಡಲಾಗಿದೆ. ದುಷ್ಕರ್ಮಿಗಳು ಬೈಕ್ ಅಡ್ಡಗಟ್ಟಿ ಜೆಡಿಎಸ್ ಮುಖಂಡನನ್ನು ನಡು ರಸ್ತೆಯಲ್ಲೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗೇಟ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮತ್ತು ಜಿಲ್ಲಾ ವರಿಷ್ಠ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ತಂಡಗಳನ್ನು ರಚಿಸಿಕೊಂಡು ಹಂತಕರನ್ನು ಹೆಡೆಮುರಿಕಟ್ಟಲು ಕಾರ್ಯಚರಣೆಗೆ ಇಳಿದಿದ್ದಾರೆ….
ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡ, ಹೆಚ್ಡಿಕೆ ಅಪ್ಪಟ ಅಭಿಮಾನಿಯ ಬರ್ಬರ ಹತ್ಯೆ.!
ASHWASURYA/SHIVAMOGGA
ಅಶ್ವಸೂರ್ಯ/ಚಿಕ್ಕಬಳ್ಳಾಪುರ: ಕೆಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರ ಅಪ್ಪಟ ಅಭಿಮಾನಿ ಹಾಗೂ ಜೆಡಿಎಸ್ (JDS) ಮುಖಂಡನನ್ನು ಶುಕ್ರವಾರ ತಡರಾತ್ರಿ ನಡು ರಸ್ತೆಯಲ್ಲೆ ಮನಬಂದಂತೆ ಲಾಂಗು ಮಚ್ಚುಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ.
ಹತ್ಯೆಗೊಳಗಾದ ವ್ಯಕ್ತಿಯನ್ನು ಗ್ರಾಮದ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಎಂದು ಗುರುತಿಸಲಾಗಿದೆ. ಎಂದಿನಂತೆ ವೆಂಕಟೇಶ್ ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯಕನಹಳ್ಳಿ ಗೇಟ್ ನಲ್ಲಿರುವ ಮೆಡಿಕಲ್ ಸ್ಟೋರ್ನಿಂದ ಮನೆಗೆ ತೆರಳುತ್ತಿದ್ದರು. ಈ ವೇಳೆ ಸಂಚು ರೂಪಿಸಿ, ಮನೆಯತ್ತ ಸ್ಕೂಟಿ ಮೂಲಕ ಹೊರಟಿದ್ದ ವೆಂಕಟೇಶ್ ಅವರಿಗೆ ಅಡ್ಡ ಬಂದು ನಿಂತ ಹಂತಕರ ಗ್ಯಾಂಗ್ ಏಕಾಏಕಿ ವೆಂಕಟೇಶ್ ಅವರ ಮೇಲೆ ಮನಬಂದಂತೆ ನುಗ್ಗಿ ಲಾಂಗು ಮಚ್ಚುಗಳಿಂದ ಮನಬಂದಂತೆ ಬಲವಾಗಿ ಕೊಚ್ಚಿದ ಪರಿಣಾಮ ವೆಂಕಟೇಶ್ ಅವರ ಎಡಗೈ ತೋಳಿನ ಭಾಗ ಕಟ್ ಆಗಿದೆ.!ಅ ಸಂಧರ್ಭದಲ್ಲಿ ಗಾಡಿ ಸಮೇತ ವೆಂಕಟೇಶ್ ನೆಲಕ್ಕೆ ಬಿದ್ದಿದ್ದಾರೆ.ವೆಂಕಟೇಶ್ ನೆಲಕ್ಕೆ ಬಿಳುತ್ತಿದ್ದಂತೆ ಹಂತಕರ ಗ್ಯಾಂಗ್ ಕೂಡಲೇ ಮನಸ್ಸೋ ಇಚ್ಛೆ ಮುಖಕ್ಕೆ ದೇಹದ ಇನ್ನಿತರ ಜಾಗಕ್ಕೆ ಲಾಂಗ್ ನಿಂದ ಕೊಚ್ಚಿದ್ದಾರೆ. ಹೊಟ್ಟೆಯ ಭಾಗಕ್ಕೆ ಬಲವಾಗಿ ಬೀಸಲಾದ ಲಾಂಗಿನೇಟಿಗೆ ವೆಂಕಟೇಶ್ ಅವರ ದೇಹದಿಂದ ರಕ್ತದ ಕೊಡಿಯೆ ಹರಿದು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.!
ಹತ್ಯೆಯಾಗುವುದಕ್ಕೂ ಕೆಲವು ನಿಮಿಷಗಳ ಮುನ್ನ ವೆಂಕಟೇಶ್, ಮಗನಿಗೆ ಕರೆ ಮಾಡಿ ಮನೆಗೆ ಬರುತ್ತಿದ್ದು, ಮುದ್ದೆ ಮಾಡುವಂತೆ ತಿಳಿಸಿದ್ದರಂತೆ. ಆದರೆ ಅಷ್ಟರಲ್ಲೇ ದಾರಿ ಮಧ್ಯೆ ಹಂತಕರ ಲಾಂಗಿನೇಟಿಗೆ ನಡು ಹಾದಿಯಲ್ಲಿ ಕೊಲೆಯಾಗಿ ಹೊಗಿದ್ದಾರೆ. ತಕ್ಷಣವೇ ದಾರಿ ಹೋಕರು ನೋಡಿ ಅವರ ಮಗನಿಗೆ ಪೋನ್ ಮಾಡಿ ವಿಷಯ ತಿಳಿಸಿದ್ದಾರೆ.
ಹತ್ಯೆಯಾದ ವೆಂಕಟೇಶ್ ಮಗ ಪೊಲೀಸರ ಬಳಿ, ತಮ್ಮ ತಂದೆ ತಮ್ಮೂರಿನ ರಸ್ತೆಯಲ್ಲಿರುವ ಬಾರ್ ಬಳಿ ಕೆಲವು ಅಕ್ಕ ಪಕ್ಕದ ಗ್ರಾಮದ ಯುವಕರು ಕುಡಿದು ಗಲಾಟೆ ಮಾಡುತ್ತಿದ್ದರು. ಮೂರು ದಿನಗಳ ಹಿಂದೆ ಬೈದು ಬುದ್ದಿವಾದ ಹೇಳಿದ್ದರು. ಹಾಗಾಗಿ ಆ ಹುಡುಗರು ಕೊಲೆ ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾನೆ.
ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಸೇರಿದಂತೆ ಪೊಲೀಸರ ತಂಡ ಪರಿಶೀಲನೆ ನಡೆಸಿ ಹಂತಕರನ್ನು ಹೆಡೆಮುರಿಕಟ್ಟಲು ಕಾರ್ಯಚರಣೆಗೆ ಇಳಿದಿದ್ದಾರೆ.