ಶಿವಮೊಗ್ಗ ನಗರಕ್ಕೆ ಭೇಟಿ ನೀಡಿದ ದಾವಣಗೆರೆ ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಬಿ. ಆರ್. ರವಿಕಾಂತೆ ಗೌಡ, ಐಪಿಎಸ್.
ಅಶ್ವಸೂರ್ಯ/ಶಿವಮೊಗ್ಗ:ದಾವಣಗೆರೆ ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಬಿ. ಆರ್. ರವಿಕಾಂತೆ ಗೌಡ, ಐಪಿಎಸ್,ರವರು 24 ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದರು, ಡಿಎಆರ್ ಪೊಲೀಸ್ ಸಭಾಂಗಣದ ಆವರಣದಲ್ಲಿ ಗೌರವ ವಂದನೆಗಳನ್ನು ಸ್ವೀಕರಿಸಿದ ನಂತರ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ನಿರೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಪೊಲೀಸ್ ಉಪಾಧೀಕ್ಷಕರುಗಳೊಂದಿಗೆ ಸಭೆ ನಡೆಸಿದರು, ಉತ್ತಮ ಕರ್ತವ್ಯ ನಿರ್ವಹಿಸುವ ನಿಟ್ಟಿನಲ್ಲಿ ಸಾಕಷ್ಟು ಸಲಹೆ ಸೂಚನೆಗಳನ್ನು ಪೂರ್ವ ವಲಯ ನಿರೀಕ್ಷಕರಾದ ರವಿಕಾಂತೆ ಗೌಡ ಅವರು ನೀಡಿದರು.
ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಿಥುನ್ ಕುಮಾರ್ ಜಿ. ಕೆ, ಐಪಿಎಸ್,ಮತ್ತು ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಕಾರಿಯಪ್ಪ ಎ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಕೃಷ್ಣಮೂರ್ತಿ, ಪೊಲೀಸ್ ಉಪಾಧೀಕ್ಷಕರು, ಡಿಎಆರ್, ಶಿವಮೊಗ್ಗ, ಬಾಬು ಆಂಜನಪ್ಪ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಎ ಉಪ ವಿಭಾಗ,
ಸಂಜೀವ್ ಕುಮಾರ್. ಟಿ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಬಿ ಉಪ ವಿಭಾಗ, ಗೋಪಾಲಕೃಷ್ಣ ಟಿ ನಾಯಕ್, ಪೊಲೀಸ್ ಉಪಾಧೀಕ್ಷಕರು, ಸಾಗರ ಉಪ ವಿಭಾಗ, ಕೇಶವ್, ಪೊಲೀಸ್ ಉಪಾಧೀಕ್ಷಕರು, ಶಿಕಾರಿಪುರ ಉಪ ವಿಭಾಗ,
ಕೃಷ್ಣಮೂರ್ತಿ, ಪೊಲೀಸ್ ಉಪಾಧೀಕ್ಷಕರು, ಸಿಇಎನ್ ಪೊಲೀಸ್ ಠಾಣೆ, ಶಿವಮೊಗ್ಗ, ಮತ್ತು ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ವೃತ್ತ ನಿರೀಕ್ಷಕರು ಉಪಸ್ಥಿತರಿದ್ದರು.