ಪತ್ನಿಯ ಶೀಲ ಶಂಕಿಸದ ಪಾಪಿ ಪತಿ ನಡುರಸ್ತೆಯಲ್ಲೆ ಪತ್ನಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ಅನೇಕಲ್ನಲ್ಲಿ ನಡೆದಿದ್ದು. ಕೊಲೆಯಾದ ವಿವಾಹಿತೆ 29 ವರ್ಷದ ಶ್ರೀಗಂಗಾ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಮೋಹನ್ ರಾಜು ಎಂದು ಗುರುತಿಸಲಾಗಿದೆ.
ಅನೇಕಲ್ ತಾಲ್ಲೂಕಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ಈ ಘಟನೆ ನಡೆದಿದ್ದು. ಮಗುವನ್ನು ಶಾಲೆಗೆ ಬಿಡಲು ಬಂದಿದ್ದ ಪತ್ನಿ ಮೇಲೆ ಪತಿ ಏಕಾಏಕಿ ದಾಳಿಮಾಡಿದ್ದಾನೆ.ತಾನು ತಂದಿದ್ದ ಚಾಕುವಿನಿಂದ ಹೆಂಡತಿಯನ್ನು ಹಿರಿದು ಕೊಲೆ ಮಾಡಿದ್ದಾನೆ. ಶ್ರೀ ಗಂಗಾ ಮತ್ತು ಮೋಹನ್ ರಾಜು ಕಳೆದ 7 ವರ್ಷಗಳ ಹಿಂದೆ ಮದುವೆಯಾಗಿದ್ದರು. ಇವರಿಬ್ಬರಿಗೆ 6 ವರ್ಷದ ಮಗನೂ ಇದ್ದಾನೆ. ಆದರೆ ಮೋಹನ್ ರಾಜುಗೆ ಕಳೆದ ಎರಡುಮೂರು ವರ್ಷಗಳಿಂದ ಪತ್ನಿಯ ಶೀಲ ಶಂಕಿಸಿ ಜಗಳ ಮಾಡುತ್ತಿದ್ದನು.ಈ ಕಾರಣದಿಂದಲೇ ಇಬ್ಬರು ಬೇರೆಯಾಗಿದ್ದರು.!
ಅಕ್ರಮ ಸಂಬಂಧ ಹಿನ್ನಲೆ ನಡುಹಾದಿಯಲ್ಲೆ ಪತ್ನಿಯನ್ನು ಇರಿದುಕೊಂದ ಪತಿ.!
ಅಶ್ವಸೂರ್ಯ/ಆನೇಕಲ್: ಹೆಂಡತಿಯಶೀಲ ಶಂಕಿಸಿ ಗಂಡ ನಡುರಸ್ತೆಯಲ್ಲಿಯೇ ಚಾಕು ಇರಿದು ಹತ್ಯೆಗೈದಿರುವ ಘಟನೆ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ. ಮೃತಳನ್ನು ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿ ಶ್ರೀಗಂಗಾ (29) ಹಾಗೂ ಆರೋಪಿಯನ್ನು ಮೋಹನ್ ಎಂದು ಗುರುತಿಸಲಾಗಿದೆ.
ಏಳು ವರ್ಷಗಳ ಹಿಂದೆ ಹತ್ಯೆಯಾದ ಶ್ರೀಗಂಗಾ ಹಾಗೂ ಮೋಹನ್ ರಾಜು ವಿವಾಹವಾಗಿದ್ದರು. ಜೊತೆಗೆ ಆರು ವರ್ಷದ ಮಗನಿದ್ದ. ಎರಡು ಮೂರು ವರ್ಷಗಳ ಹಿಂದೆ ಮೋಹನ್ ತನ್ನ ಸ್ನೇಹಿತನ ಜೊತೆಗೆ ಪತ್ನಿಯ ಶೀಲ ಶಂಕಿಸಿ ಗಲಾಟೆ ಮಾಡಿದ್ದ. ಈ ವೇಳೆ ಇಬ್ಬರ ನಡುವೆ ಜಗಳವಾಗಿತ್ತು. ಕಳೆದ 8 ತಿಂಗಳ ಹಿಂದೆ ಇಬ್ಬರು ಬೇರ್ಪಟ್ಟಿದ್ದರು.
ಮಂಗಳವಾರ ರಾತ್ರಿ ಮೋಹನ್ ಮಗುವನ್ನು ನೋಡಲು ಪತ್ನಿಯ ಮನೆಗೆ ಬಂದಿದ್ದ. ಈ ವೇಳೆ ಇಬ್ಬರ ನಡುವೆ ಜಗಳವಾಗಿತ್ತು. ಬಳಿಕ ಬುಧವಾರ ಬೆಳಗ್ಗೆ ಮಗುವನ್ನು ಶಾಲೆಗೆ ಬಿಡಲು ಶ್ರೀಗಂಗಾ ಬೈಕ್ನಲ್ಲಿ ಬಂದಿದ್ದಳು. ಈ ವೇಳೆ ಕಾದು ಕುಳಿತಿದ್ದ ಮೋಹನ್ ಆಕೆಯ ಮೇಲೆ ಅಟ್ಯಾಕ್ ಮಾಡಿ, 7 ರೀಂದ 8 ಬಾರಿ ಚಾಕುವಿನಿಂದ ಚುಚ್ಚಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದ ಶ್ರೀಗಂಗಾಳನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರ ಭೇಟಿ ನೀಡಿದ್ದು, ಆರೋಪಿ ಮೋಹನ್ ರಾಜ್ನನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ.ಬಾಬಾ ಮಾತನಾಡಿ, ಬೆಳಗ್ಗೆ ಹೆಬ್ಬಗೋಡಿ ವ್ಯಾಪ್ತಿಯ ಶಾಲೆಗೆ ಮಗುವನ್ನು ಬಿಡಲು ತಾಯಿ ಬಂದಾಗ ಈ ಘಟನೆ ನಡೆದಿದೆ. ಆಕೆಯ ಪತಿ ಶಾಲೆಯ ಕಂಪೌಂಡ್ ಬಳಿ ಬಂದು ಚಾಕುವಿನಿಂದ ಇರಿದಿದ್ದಾನೆ. ಮಾಹಿತಿ ಬಂದ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಗಾಯಾಳು ಮೃತಪಟ್ಟಿದ್ದಾರೆ. ಹೆಬ್ಬಗೋಡಿ ಠಾಣೆಯಲ್ಲಿ ಕೊಲೆ ಕೇಸ್ ದಾಖಲಿಸಿ,
ಆರೋಪಿಯನ್ನು ಬಂಧಿಸಿದ್ದೇವೆ. ಪತಿ ಹಾಗೂ ಆತನ ಸ್ನೇಹಿತ ಒಂದೇ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು, ಈ ಹಿಂದೆ ಪತಿಯ ಸ್ನೇಹಿತನನ್ನು ಮನೆಯಲ್ಲಿ ಇರಿಸಿಕೊಂಡಿದ್ದರು. ಈ ವೇಳೆ ಪತಿಯ ಸ್ನೇಹಿತ ಹಾಗೂ ಮೃತಳ ನಡುವೆ ಸಂಬಂಧ ಇದೆ ಎಂದು ಗಲಾಟೆ ನಡೆದಿದೆ. ನಂತರ ಪತಿ, ಪತ್ನಿ ದೂರವಾಗಿದ್ದರು. ಕಳೆದ ಕೆಲ ತಿಂಗಳಿನಿಂದ ಮಗುವನ್ನು ನೋಡಿಲ್ಲವೆಂದು ಕೋಪಗೊಂಡು ಚಾಕು ಇರಿದು ಕೊಂದಿರುವುದಾಗಿ ಆತ ತಿಳಿಸಿದ್ದಾನೆ.