




ವಿದ್ಯಾರ್ಥಿ ಜೀವನದಲ್ಲಿ ಸುಖಕ್ಕಿಂತ ಪರಿಶ್ರಮದ ಹಾದಿ ಮುಖ್ಯ ಎಂಬ ನಮ್ಮ ಕಿವಿ ಮಾತನ್ನು ಸದಾ ಮನಸಿನಲ್ಲಿಟ್ಟುಕೊಂಡಿದ್ದ ಮಗಳು, ಆರು ಬಾರಿ ಪೂರ್ವಸಿದ್ಧತಾ ಪರೀಕ್ಷೆ ಬರೆದು ನಿರಂತರ ಶ್ರಮ ವಹಿಸಿದ್ದಳು. ತನ್ನ ನಿರೀಕ್ಷೆಯಷ್ಟು ಅಂಕ ಬಂದಿಲ್ಲ ಎಂಬ ಬೇಸರ ಅವಳಿಗಿದ್ದರೂ ತಂದೆಯಾಗಿ ಅವಳ ಈ ಸಾಧನೆ ಸಂತೋಷ ನೀಡಿದೆ. ಮತ್ತೊಮ್ಮೆ ಅಭಿನಂದನೆಗಳು ಮಗಳೇ..
ಪುಸ್ತಕದ ಪಾಠದಷ್ಟೆ ಜೀವನದ ಪಾಠವೂ ಮುಖ್ಯ. ಆ ಸವಾಲನ್ನು ಅರ್ಥ ಮಾಡಿಕೊಳ್ಳುವುದೇ ನಿಜವಾದ ಭವಿಷ್ಯ ಎಂದು ಸಾಮಾಜಿಕ ಜಾಲತಾಣದಲ್ಲಿ ಖುಷಿ ವ್ಯಕ್ತಪಡಿಸಿದ್ದಾರೆ.
ಪಿಯುಸಿ ಫಲಿತಾಂಶ : ನಿರೀಕ್ಷೆಯಷ್ಟು ಅಂಕ ಬರ್ಲಿಲ್ಲ ಎಂದು ಮಗಳಿಗೆ ಬೇಸರ; ಶಾಸಕ ಸುನಿಲ್ ಕುಮಾರ್ ಪುತ್ರಿಯ ಒಟ್ಟು ಅಂಕ.?
ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ಕ್ಷೇತ್ರದ ಜನಪ್ರಿಯ ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರ ಮಗಳು ಪ್ರೇರಣಾ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು….ಪಡೆದ ಅಂಕ ಅವರಿಗೆ ಖುಷಿ ಕೊಟ್ಟಿಲ್ಲವಂತೆ.?
ಹೌದು, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ಕ್ಷೇತ್ರದ ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರ ಮಗಳು ಪ್ರೇರಣಾ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಇದೀಗ ಶಾಸಕರ ಮಗಳು ಪ್ರೇರಣಾ ಅವರ ಫಲಿತಾಂಶ ಬಂದಿದ್ದು, 97% ಅಂಕ ಪಡೆದು ಡಿಸ್ಟಿಂಕ್ಷನ್ನಲ್ಲಿ ಪಾಸ್ ಆಗಿದ್ದಾರೆ. ಮಗಳ ಸಾಧನೆಯನ್ನು ಕಂಡು ಖುಷಿಯಲ್ಲಿ ಇದೀಗ ಶಾಸಕ ಸುನಿಲ್ ಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಮಗಳ ಸಾಧನೆಯನ್ನ ಮೆಚ್ಚಿದ ಶಾಸಕ!
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 97ರಷ್ಟು ಅಂಕ ಪಡೆದ ತಮ್ಮ ಮಗಳಿಗೆ ಶಾಸಕ ಸುನಿಲ್ ಕುಮಾರ್ ಅಭಿನಂದಿಸಿದ್ದು, ಮಗಳೇ ಓದಿಯಾಯ್ತಾ ಎಂದು ಪ್ರಶ್ನಿಸಿದಾಗಲೆಲ್ಲ “ಒಳ್ಳೆ ಮಾರ್ಕ್ಸ್ ತೆಗೆದರೆ ಆಯ್ತಲ್ವಾ ಈಗ ಕಿರಿಕಿರಿ ಮಾಡಬೇಡಿ” ಎಂದು ಹುಸಿಕೋಪ ಪ್ರದರ್ಶಿಸುತ್ತಿದ್ದಳು ನನ್ನ ಮುದ್ದಿನ ಮಗಳು ಪ್ರೇರಣಾ. ಈಗ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.97 ರಷ್ಟು ಅಂಕ ಪಡೆದು ಉತ್ತೀರ್ಣಳಾಗಿದ್ದಾಳೆ.
ಮಗಳಿಗೆ ಅಭಿನಂದನೆ ಹೇಳಿದ ಶಾಸಕ ಸುನೀಲ್ ಕುಮಾರ್.
ಪರೀಕ್ಷೆಯೆಂದರೆ ಮಕ್ಕಳಿಗಿಂತ ಹೆತ್ತವರಿಗೆ ಕಾಳಜಿ ಹೆಚ್ಚು. ಆದರೆ ನಾವೆಂದೂ ಅಂಕ ಗಳಿಕೆಯ ಒತ್ತಡವನ್ನು ಅವಳ ಮೇಲೆ ಹೇರಿರಲಿಲ್ಲ. ಆದರೆ ತನ್ನ ಜವಾಬ್ದಾರಿಯನ್ನು ಅರಿತು ಪರಿಶ್ರಮದಿಂದ ಓದಿದಳು. ಜ್ಞಾನಸುಧಾದ ಉಪನ್ಯಾಸಕರ ತಂಡ ಸೂಕ್ತ ಮಾರ್ಗದರ್ಶನ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಲೇಬೇಕು. ಒಬ್ಬ ವಿಧೇಯ ವಿದ್ಯಾರ್ಥಿನಿಯಾಗಿ ಓದು ಹಾಗೂ ಮುಂದಿನ ಗುರಿಯೆಡೆಗಿನ ನಿನ್ನ ಸ್ಪಷ್ಟತೆಯ ಬಗ್ಗೆ ನಾನು ಹೆಮ್ಮೆ ಪಡುತ್ತೇನೆ.
ವಿದ್ಯಾರ್ಥಿ ಜೀವನದಲ್ಲಿ ಸುಖಕ್ಕಿಂತ ಪರಿಶ್ರಮದ ಹಾದಿ ಮುಖ್ಯ ಎಂಬ ನಮ್ಮ ಕಿವಿ ಮಾತನ್ನು ಸದಾ ಮನಸಿನಲ್ಲಿಟ್ಟುಕೊಂಡಿದ್ದ ಮಗಳು, ಆರು ಬಾರಿ ಪೂರ್ವಸಿದ್ಧತಾ ಪರೀಕ್ಷೆ ಬರೆದು ನಿರಂತರ ಶ್ರಮ ವಹಿಸಿದ್ದಳು. ತನ್ನ ನಿರೀಕ್ಷೆಯಷ್ಟು ಅಂಕ ಬಂದಿಲ್ಲ ಎಂಬ ಬೇಸರ ಅವಳಿಗಿದ್ದರೂ ತಂದೆಯಾಗಿ ಅವಳ ಈ ಸಾಧನೆ ಸಂತೋಷ ನೀಡಿದೆ. ಮತ್ತೊಮ್ಮೆ ಅಭಿನಂದನೆಗಳು ಮಗಳೇ..
ಪುಸ್ತಕದ ಪಾಠದಷ್ಟೆ ಜೀವನದ ಪಾಠವೂ ಮುಖ್ಯ. ಆ ಸವಾಲನ್ನು ಅರ್ಥ ಮಾಡಿಕೊಳ್ಳುವುದೇ ನಿಜವಾದ ಭವಿಷ್ಯ ಎಂದು ಸಾಮಾಜಿಕ ಜಾಲತಾಣದಲ್ಲಿ ಖುಷಿ ವ್ಯಕ್ತಪಡಿಸಿದ್ದಾರೆ.

ಅಭಿನಂದನೆಗಳು ಮಗಳೇ..
ಮಗಳೇ ಓದಿಯಾಯ್ತಾ ಎಂದು ಪ್ರಶ್ನಿಸಿದಾಗಲೆಲ್ಲ ” ಒಳ್ಳೆ ಮಾರ್ಕ್ಸ್ ತೆಗೆದರೆ ಆಯ್ತಲ್ವಾ ಈಗ ಕಿರಿಕಿರಿ ಮಾಡಬೇಡಿ” ಎಂದು ಹುಸಿಕೋಪ ಪ್ರದರ್ಶಿಸುತ್ತಿದ್ದ ಮುದ್ದಿನ ಮಗಳು ಪ್ರೇರಣಾ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.97 ರಷ್ಟು ಅಂಕ ಪಡೆದು ಉತ್ತೀರ್ಣಳಾಗಿದ್ದಾಳೆ. ಪರೀಕ್ಷೆಯೆಂದರೆ ಮಕ್ಕಳಿಗಿಂತ ಹೆತ್ತವರಿಗೆ ಕಾಳಜಿ ಹೆಚ್ಚು. ಆದರೆ ನಾವೆಂದೂ ಅಂಕ ಗಳಿಕೆಯ ಒತ್ತಡವನ್ನು ಅವಳ ಮೇಲೆ ಹೇರಿರಲಿಲ್ಲ. ಆದರೆ ತನ್ನ ಜವಾಬ್ದಾರಿಯನ್ನು ಅರಿತು ಪರಿಶ್ರಮದಿಂದ ಓದಿದಳು. ಜ್ಞಾನಸುಧಾದ ಉಪನ್ಯಾಸಕರ ತಂಡ ಸೂಕ್ತ ಮಾರ್ಗದರ್ಶನ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಲೇಬೆಕು…









