Headlines

ಸುಹಾಸ್ ಶೆಟ್ಟಿ ಹತ್ಯೆ: ಮುಸ್ಲಿಂ ಹೆಡ್‌ಕಾನ್ಸ್‌ಟೇಬಲ್‌ ಭಾಗಿಯಾಗಿದ್ದಾರ.?

ಅಶ್ವಸೂರ್ಯ/ಮಂಗಳೂರು: ಮಂಗಳೂರಿನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ಸಾಕಷ್ಟು ವಿಷಯಗಳು ಬಯಲಾಗುತ್ತಿವೆ.! ಹಿಂದೂ ಸಂಘಟನೆಗಳಿಂದ ಗಂಭೀರ ಆರೋಪ ಮಾಡಿದ್ದು ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಒಬ್ಬ ಸುಹಾಸ್ ಶೆಟ್ಟಿಗೆ
ನಿರಾಯುಧನಾಗಿ, ಒಬ್ಬಂಟಿಯಾಗಿ ಇರುವಂತೆ ವಾರ್ನ್ ಮಾಡಿದ್ದರಂತೆ.?
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಹತ್ಯೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯ ಮುಸ್ಲಿಂ ಹೆಡ್ ಕಾನ್ಸ್‌ಟೇಬಲ್‌ ಕೈವಾಡ ಇದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಸುಹಾಸ್ ಶೆಟ್ಟಿ ಹತ್ಯೆಯಾದ ಕ್ಷಣದಿಂದ ದಿನಕ್ಕೊಂದು ಅನುಮಾನ, ಆಯಾಮಗಳು ಹುಟ್ಟುತ್ತಲೇ ಇದೆ. ಮೊದಲಿಗೆ ರಿವೇಂಜ್‌ಗಾಗಿ ಫಾಝಿಲ್ ತಮ್ಮ ಆದಿಲ್ ಮೆಹರೂಫ್ ಸುಫಾರಿ ಕೊಟ್ಟು ಹತ್ಯೆ ನಡೆಸಿದ್ದಾನೆಂದು ಆರೋಪಿಗಳ ಬಂಧನ ವೇಳೆ ಬೆಳಕಿಗೆ ಬಂದಿತ್ತು. ಬಳಿಕ ಹತ್ಯೆಯಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆ ಭಾಗಿಯಾಗಿದೆ ಎಂಬ ಅನುಮಾನ ಹುಟ್ಟಿಕೊಂಡಿದ್ದವು. ಇದೀಗ ಹತ್ಯೆಯಲ್ಲಿ ಪೊಲೀಸರು ಕೈ ಜೋಡಿಸಿದ್ದಾರೆ ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದ್ದು ಸಮನಾದ ಶೆಟ್ಟಿ ಹತ್ಯೆಗೆ ಸಂಭಂಧಿಸಿದಂತೆ ದಿನಕ್ಕೊಂದು ಸ್ಫೋಟಕ ಮಾಹಿತಿ ಬಯಲಾಗುತ್ತಿದೆ.
ಆರಂಭದಿಂದಲೂ ಸುಹಾಸ್ ತಾಯಿ ಬಜಪೆ ಪೊಲೀಸರೇ ನನ್ನ ಮಗನನ್ನು ಸಾಯುವಂತೆ ಮಾಡಿದ್ದಾರೆಂದು ಎಂದು ಹೇಳುತ್ತಿದ್ದರು. ಇದೀಗ ಹಲವಾರು ಸ್ಫೋಟಕ ವಿಚಾರಗಳು ಬಹಿರಂಗಗೊಂಡಿದ್ದು, ಸದ್ಯ ಪ್ರಕರಣದ ತನಿಖೆಯನ್ನು ಎನ್‌ಐಎಗೆ ನೀಡುವಂತೆ ಒತ್ತಾಯ ಹೆಚ್ಚಾಗಿದೆ.

ಸುಹಾಸ್ ಶೆಟ್ಟಿ ಹತ್ಯೆಯ ಹಿನ್ನಲೆ ಹಿಂದೂ ಸಂಘಟನೆಗಳ ಆರೋಪ ಏನು?
ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಬಜಪೆ (Bajpe) ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್‌ ರಶೀದ್ ನೇರವಾಗಿ ಭಾಗಿಯಾಗಿದ್ದಾರೆ ಎನ್ನುವ ಶಂಕೆ ಹೆಚ್ಚಾಗಿದೆ.!? ಸುಹಾಸ್ ಶೆಟ್ಟಿ ಬಜಪೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಈ ವ್ಯಾಪ್ತಿಗೆ ಬರುವ ಬಜಪೆ ಪೊಲೀಸ್ ಠಾಣೆ ಪೊಲೀಸರು ಆಗಾಗ ಸುಹಾಸ್ ಶೆಟ್ಟಿಯನ್ನು ಠಾಣೆಗೆ ಕರೆಸಿ ಕಿರುಕುಳ ನೀಡುತ್ತಿದ್ದರು. ಅದರಲ್ಲೂ ಠಾಣೆಯ ಕಾನ್ಸ್‌ಟೇಬಲ್‌ ರಶೀದ್ ಪದೇ ಪದೇ ಕರೆದು ಸಾಕಷ್ಟು ಕಿರುಕುಳ ನೀಡುತ್ತಿದ್ದರು. ಕಳೆದ ಒಂದು ವಾರದ ಹಿಂದೆ ಕುಡುಪು ಎಂಬಲ್ಲಿ ಅಶ್ರಫ್ ಎಂಬಾತನ ಗುಂಪು ಹತ್ಯೆ ನಡೆದ ದಿನವೂ ರಶೀದ್ ಸುಹಾಸ್ ಶೆಟ್ಟಿಯನ್ನು ಬಜಪೆ ಠಾಣೆಗೆ ಕರೆಸಿ ನೀನು ಯಾವುದೇ ಮಾರಕಾಸ್ತ್ರಗಳನ್ನು ಇಡಬೇಡ, ನಿನ್ನ ಜೊತೆ ಯಾರೂ ಯುವಕರು ಇರಬಾರದು, ಹೆಚ್ಚಿಗೆ ಓಡಾಡಬೇಡ ಎಂದು ಎಚ್ಚರಿಕೆ ನೀಡಿದ್ದರಂತೆ.! ಹೀಗಾಗಿ ಸುಹಾಸ್ ಶೆಟ್ಟಿಯ ಚಲನವಲನಗಳನ್ನು ಗಮನಿಸುತ್ತಿದ್ದ ಹೆಡ್ ಕಾನ್ಸ್‌ಟೇಬಲ್‌ ರಶೀದ್ ಹಂತಕರಿಗೆ ಸುಹಾಸ್ ಬರುವ ಹಾಗೂ ನಿರಾಯುಧನಾಗಿ ಇದ್ದಾನೆ ಎನ್ನುವ ಮಾಹಿತಿ ನೀಡಿದ್ದಾನೆಂದು ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಸಂಚಾಲಕ ಶರಣ್ ಪಂಪ್‌ವೆಲ್ ಮತ್ತು ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಚಾಲಕ ಕೆ.ಟಿ.ಉಲ್ಲಾಸ್ ಆರೋಪ ಮಾಡಿದ್ದಾರೆ.

ಹಿಂದೂ ಸಂಘಟನೆಗಳ ಆರೋಪಕ್ಕೆ ಪುಷ್ಟಿ ನೀಡುವಂತೆ ಸುಹಾಸ್ ಹತ್ಯೆಯ ತನಿಖೆಯಿಂದ ಈ ರಶೀದ್‌ನನ್ನು ದೂರ ಇಡಲಾಗಿದೆ. ಹೀಗಾಗಿ ರಶೀದ್ ಅವರನ್ನು ತನಿಖೆ ನಡೆಸಬೇಕೆಂದು ಹಿಂದೂ ಸಂಘಟನೆ ಒತ್ತಾಯಿಸಿದೆ. ಎನ್‌ಐಎ ತನಿಖೆಯಾದರೆ ರಶೀದ್ ಸೇರಿ ಎಲ್ಲರ ತನಿಖೆಯಾಗುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!