Theft: ಖತರ್ನಾಕ್ ಲೇಡಿ ಗ್ಯಾಂಗ್ ಅಂದರ್..!ಚಿನ್ನಾಭರಣ ಸಹಿತ ಪೊಲೀಸರ ಖೆಡ್ಡಕ್ಕೆ ಬಿದ್ದ ಕಳ್ಳಿಯರು.!

ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ಹಾಸನ :ನಿತ್ಯ ಕಳ್ಳತನ ಮಾಡುವುದನ್ನೇ ಬದುಕು ಮಾಡಿಕೊಂಡಿದ್ದ ನಾಲ್ವರು ಖತರ್ನಾಕ್ ಕಳ್ಳಿಯರನ್ನು 6.38 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳ ಸಹಿತ ಪೋಲಿಸರು ಬಂಧಿಸಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯ ವ್ಯಾಪ್ತಿಯಲ್ಲಿ ನೆಡೆದ ವಿವಿಧ ಕಳ್ಳತನದ ಪ್ರಕರಣಗಳ ಪತ್ತೆಗೆ ಪೊಲೀಸರು ಕರ್ಯಾಚರಣೆ ನಡೆಸುತ್ತಿದ್ದ ವೇಳೆ ಚಿನ್ನಾಭರಣ ಕಳ್ಳತನದಲ್ಲಿ ತೊಡಗಿದ್ದ ನಾಲ್ವರು ಖತರ್ನಾಕ್ ಕಳ್ಳಿಯರು ಪೊಲೀಸರ ಅಥಿತಿಯಾಗಿದ್ದಾರೆ. ಈ ವೇಳೆ ಬಂಧಿತ ಆರೋಪಿಗಳಿಂದ 6.38 ಲಕ್ಷ ರೂಪಾಯಿ ಮೌಲ್ಯದ ಚಿನ್ನಭಾರಣಗಳನ್ನು ಸಹ ವಶಪಡಿಸಿಕೊಂಡಿದ್ದಾರೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ಗ್ರಾಮದ ಶಶಿ (35), ಮಾಧವಿ (40), ಅಕಿಲ (30) ಮತ್ತು ವಿದ್ಯಾ (29) ಬಂಧಿತ ಆರೋಪಿಗಳು. ಒಂದೇ ಗ್ರಾಮದವರಾಗಿರುವ ಈ ನಾಲ್ವರು, ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣಿಸುವ ಮಹಿಳೆಯರನ್ನೆ ಟಾರ್ಗೆಟ್ ಮಾಡಿಕೊಂಡು ಅವರ ಚಿನ್ನದ ಸರ, ನೆಕ್ಲಸ್ ಮತ್ತು ಇನ್ನಿತರ ಆಭರಣಗಳನ್ನು ಚಾಲಾಕಿತನದಿಂದ ಎಗರಿಸುತ್ತಿದ್ದರಂತೆ.

ಶಶಿ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಳಂತೆ, ಉಳಿದ ಮೂವರು ಕ್ರಷರ್ಗಳಲ್ಲಿ ಕಲ್ಲು ಒಡೆಯುವ ಕೆಲಸ ಮಾಡುತ್ತಿದ್ದರಂತೆ. ಆದರೆ, ಈ ನಾಲ್ವರು ಕಳ್ಳತನವನ್ನೇ ಬದುಕಾಗಿ ಮಾಡಿಕೊಂಡಿದ್ದರು. ಬಂಧಿತರಿಂದ 35 ಗ್ರಾಂ ಚಿನ್ನದ ಸರ, 22 ಗ್ರಾಂ ನೆಕ್ಲೇಸ್, 5 ಗ್ರಾಂ ಬೆಳ್ಳಿ ಗಣಪತಿ ಡಾಲರ್ ಮತ್ತು 29 ಗ್ರಾಂಮ್ ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ. ಶಶಿ ಮತ್ತು ವಿದ್ಯಾ ವಿರುದ್ಧ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಹೊಳೆನರಸೀಪುರ ಪೊಲೀಸರು ಈ ಖತರ್ನಾಕ್ ಗ್ಯಾಂಗ್ನ ಇತರ ಚಟುವಟಿಕೆಗಳ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.


