ಬೆಂಗಳೂರು : ಇವನೇನು ವಿಕೃತ ಹಂತಕ.! ಮಹಿಳೆ ದೇಹ ಬೆತ್ತಲೆಗೊಳಿಸಿ ಹತ್ಯೆಗೈದ ಪಾಗಲ್ ಪ್ರೇಮಿ.!

ASHWASURYA/SHIVAMOGGA
news.ashwasurya.in
ಪ್ರೀತಿಸಿದ ಆಂಟಿ ಸಿಗದೇ ಹುಚ್ಚನಂತಾದಗಿದ್ದ ಪಾಗಲ್ ಪ್ರೇಮಿಯೊಬ್ಬ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದ.!ಈತ ಸಾಫ್ಟ್ವೇರ್ ಎಂಜಿನಿಯರ್.!
ಅಶ್ವಸೂರ್ಯ/ಬೆಂಗಳೂರು: ಅನೈತಿಕ ಸಂಬಂಧಕ್ಕೆ ಬಿದ್ದು ವಿವಾಹಿತ ಮಹಿಳೆಯೊಬ್ಬಳನ್ನು ಅನುಮಾನಿಸಿ ಭೀಕರ ಹತ್ಯೆಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ಸರಹದ್ದಿನಲ್ಲಿ ನೆಡೆದಿದೆ. ಕೊಲೆ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ, ಪೊಲೀಸ್ ತನಿಖೆ ವೇಳೆ ಆರೋಪಿಯ ವಿಕೃತ ಮನಸ್ಥಿತಿ ಬಯಲಾಗಿದೆ.

ಹರಿಣಿ (36) ಕೊಲೆಯಾದ ಪಾಗಲ್ ಪ್ರೇಮಿಯ ಪ್ರಿಯತಮೆ,ಹಂತಕ ಟೆಕ್ಕಿ ಯಶಸ್ (25) ಬಹಳ ದಿನಗಳಿಂದ ಪ್ರೀತಿಸಿದ ಅಂಟಿಯನ್ನು ಮೀಟ್ ಮಾಡಲಾಗದೆ ತಲೆ ಕೆಡಿಸಿಕೊಂಡಿದ್ದ ಟೆಕ್ಕಿ ಆಕೆ ಸಿಗುತ್ತಿದ್ದಂತೆ ಮುಗಿಸಿಬಿಡಬೇಕೆಂದು ಮುಂಚೆಯೇ ಸ್ಕೆಚ್ ಹಾಕಿಕೊಂಡಿದ್ದನಂತೆ.! ಅದರಂತೆ ಪೂರ್ಣ ಪ್ರಜ್ಞಾ ಲೇಔಟ್ನಲ್ಲಿನ ಓಯೋ ರೂಮಿಗೆ ಪ್ರಿಯತಮೆ ಅಂಟಿ ಹರಿಣಿಯನ್ನು ಕರೆದೊಯ್ದು ಬರೋಬ್ಬರಿ 17 ಬಾರಿ ಮನಬಂದಂತೆ ಚಾಕುವಿನಿಂದ ಆಕೆಯನ್ನು ಇರಿದು ಕೊಂದಿದ್ದಾನೆ.! ಆಕೆಯ ದೇಹವನ್ನ ಬೆತ್ತಲೆಗೊಳಿಸಿ ಹರಿಣಿಯ ಕತ್ತು, ಎದೆ ಭಾಗ, ಹೊಟ್ಟೆ ಸೇರಿ ದೇಹದ ಹಲವು ಭಾಗಗಳಿಗೆ ಮನಬಂದಂತೆ ಇರಿದಿದ್ದಾನೆ ಪಾಗಲ್ ಪ್ರೇಮಿ.!

ಕೊಂದು ಆತ್ಮಹತ್ಯೆಗೆ ಯತ್ನಿಸಿ ಟೆಕ್ಕಿ.?
ಪಾಗಲ್ ಪ್ರೇಮಿ ಟೆಕ್ಕಿ ಯಶಸ್ ಹರಿಣಿಯನ್ನ ಬೆತ್ತಲೆಗೊಳಿಸಿ ಭೀಕರವಾಗಿ ಹತ್ಯೆಗೈದು ಕೊಲೆ ಮಾಡಿದ ಬಳಿಕ ಮನೆಗೆ ತೆರಳಿ ತಾನೂ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.! ಬಳಿಕ ತಾನೇ ಕೆಂಗೇರಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ ಹಂತಕ ಯಶಸ್.! ಆದರೆ ಕೆಂಗೇರಿ ಪೊಲೀಸರು ನಮ್ಮ ಠಾಣೆ ವ್ಯಾಪ್ತಿಗೆ ಬರೋಲ್ಲ ಅಂತ ಹೇಳಿ ಆರೋಪಿಯನ್ನು ಕರೆದುಕೊಂಡು ಸುಬ್ರಮಣ್ಯಪುರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ.

ಆಂಟಿ ಮತ್ತು ಟೆಕ್ಕಿ ಯುವಕನ ಲವ್ಸ್ಟೋರಿ ಕೊಲೆಯಲ್ಲಿ ಅಂತ್ಯ.!?
ಕೆಂಗೇರಿ ಮೂಲದ ಹರಿಣಿ, ದಾಸೇಗೌಡ ಎಂಬವರ ಪತ್ನಿ. ಕೆಲ ತಿಂಗಳ ಹಿಂದೆ ಏರಿಯಾದಲ್ಲಿ ಜಾತ್ರೆ ಇತ್ತು, ಗೃಹಿಣಿ ಹರಿಣಿ ಇದ್ದ ಏರಿಯಾಗೆ ಜಾತ್ರೆಗೆ ಹೋಗಿದ್ದ ಟೆಕ್ಕಿ ಯಶಸ್,ಜಾತ್ರೆಯಲ್ಲಿ ಆಕೆಯನ್ನ ಪರಿಚಯ ಮಾಡಿಕೊಂಡಿದ್ದ. ಕೊನೆಗೆ ಇಬ್ಬರು ಫೋನ್ ನಂಬರ್ ಕೂಡ ಪರಸ್ಪರ ಪಡೆದುಕೊಂಡಿದ್ರು. ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದು ಚಾಟಿಂಗ್, ಡೇಟಿಂಗ್ ಶುರು ಮಾಡಿಕೊಂಡಿದ್ದರಂತೆ. ಹೀಗಾಗಿ ಇಬ್ಬರ ನಡುವೆ ಅನೈತಿಕ ಸಂಬಂಧವು ಇತ್ತು ಎನ್ನಲಾಗುತ್ತಿದೆ.
ಕ್ರಮೇಣ ಹರಿಣಿ ಗಂಡ ದಾಸೇಗೌಡನಿಗೆ ಪತ್ನಿಯ ಅನೈತಿಕ ಸಂಬಂಧದ ಗೊತ್ತಾಗಿತ್ತು. ನಂತರ ಹೆಂಡತಿಯ ಫೋನ್ ಕಿತ್ಕೊಂಡು ಮನೆಯಲ್ಲೇ ಕೂಡಿ ಹಾಕಿದ್ದನಂತೆ. ಕೆಲ ತಿಂಗಳ ಬಳಿಕ ಮತ್ತೆ ಹೊರ ಬಂದಿದ್ದ ಹರಿಣಿ, ತನ್ನ ಬಾಯ್ ಫ್ರೆಂಡ್ ಯಶಸ್ನ ಸಂಪರ್ಕಿಸಿದ್ದಾಳೆ.

ಇತ್ತ ಹರಿಣಿ ಸಂಪರ್ಕಕ್ಕೆ ಸಿಗದೇ ಹುಚ್ಚನಂತೆ ಆಗಿದ್ದ ಯಶಸ್, ಸಿಕ್ಕ ಕೂಡಲೇ ಮುಗಿಸಿಬಿಡಬೇಕೆಂದು ನಿರ್ಧಾರ ಮಾಡಿಕೊಂಡಿದ್ದ. ಹೀಗಾಗಿ ಚಾಕು ಕೂಡ ಮೊದಲೆ ಖರೀದಿಸಿ ಇಟ್ಟಿದ್ದನಂತೆ.! ಮತ್ತೆ ಹರಿಣಿಯನ್ನು ಮೀಟ್ ಮಾಡಿ ಮಾತುಕತೆ ಮಾಡಿಕೊಂಡು ಓಯೋ ರೂಮ್ಗೆ ಕರೆದೊಯ್ದ ಯಶಸ್, ಅವಳು ಬೇರೆ ಯಾರಿಗೂ ಎಂದಿಗೂ ಸಿಗಬಾರದೆಂದು ಆಕೆಯನ್ನು ಮನಬಂದಂತೆ ಚಾಕುವಿನಿಂದ ಇರಿದು ಕೊಂಡಿದ್ದಾನೆ.

ಯಶಸ್ ಶುಕ್ರವಾರ ಕೊಲೆ ಮಾಡಿ ಪರಾರಿಯಾಗಿದ್ದ. ನಂತರ ಸುಬ್ರಹ್ಮಣ್ಯಪುರ ಇನ್ಸ್ಪೆಕ್ಟರ್ ರಾಜು ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲಿಸಿತ್ತು. ಬಳಿಕ ಎಫ್ಎಸ್ಎಲ್ ತಂಡ ಕರೆಸಿ ಎಲ್ಲಾ ಸಾಕ್ಷ್ಯ ಸಂಗ್ರಹಿಸುವ ಹೊತ್ತಿಗೆ ಆರೋಪಿಯೆ ಪೊಲೀಸರಿಗೆ ಶರಣಾಗಿದ್ದಾನೆ. ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ನನಗೂ ಆಕೆಗೂ ಅನೈತಿಕ ಸಂಬಂಧ ಇತ್ತು. ನನಗೆ ಸಿಗದೆ ದೂರವಾಗಿದ್ದಳು. ಹೀಗಾಗಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದು.
ಆರೋಪಿಯನ್ನು ಕೋರ್ಟ್ಗೆ ಹಾಜರು ಪಡಿಸಲಾಗಿದೆ.


