ಪುತ್ತೂರು : ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ.! ಮದುವೆಯ ಮುಂಚೆ ಮಗು ಒಂದನ್ನು ಕೈಗಿಟ್ಟು.! ಎಸ್ಕೇಪ್ ಅದ ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ.!
news.ashwasurya.in
ಅಶ್ವಸೂರ್ಯ/ಪುತ್ತೂರು : ಪುತ್ತೂರಿನ ಬಿಜೆಪಿ ಲೀಡರ್ನ ಪುತ್ರ ಶ್ರೀಕೃಷ್ಣ ಎಂಬ ಯುವಕನ ವಿರುದ್ಧ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಿಣಿ ಮಾಡಿದ ಆರೋಪದ ಮೇಲೆ ದೂರು ದಾಖಲಾಗಿದೆ. ಯುವತಿ ಮಗುವಿಗೆ ಜನ್ಮ ನೀಡಿದ ಬಳಿಕ ಆರೋಪಿ ಕೃಷ್ಣ ಎಸ್ಕೇಪ್ ಆಗಿದ್ದಾನೆ.ತೆವಲು ತಿರಿಸಿಕೊಂಡು ಎಸ್ಕೇಪ್ ಆಗಿರುವ ಆರೋಪಿಯ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಆರೋಪಿ ಕೃಷ್ಣ ಪುತ್ತೂರು ನಗರದ ಬಿಜೆಪಿ ಮುಖಂಡನ ಪುತ್ರ ಎಂದು ತಿಳಿದಿದ್ದು ಆತನ ವಿರುದ್ಧ ಪ್ರೀತಿಸಿ ಮದುವೆಯ ಮುಂಚೆಯೆ ಆಕೆಯ ಕೈಗೊಂದು ಮಗು ಕೊಟ್ಟು ಮೋಸಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಯುವತಿ ಮಗುವಿಗೆ ಜನ್ಮ ನೀಡಿದ್ದು ಅದರ ಬೆನ್ನಲ್ಲೇ ಶ್ರೀಕೃಷ್ಣ ವಿರುದ್ಧ ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಪ್ಪಳಿಗೆಯಲ್ಲಿ ಈ ಪ್ರಕರಣ ನಡೆದಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ತಿಳಿದುಬಂದಿದೆ. ಶುಕ್ರವಾರ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳೂರಿನ ಖಾಸಗಿ ಕಾಲೇಜಿನ ಬಿ.ಎಸ್ಸಿ ಫಾರೆನ್ಸಿಕ್ ಸೈನ್ಸ್ ವಿದ್ಯಾರ್ಥಿನಿ ಮೋಸಹೋದ ಯುವತಿ.ಪುತ್ತೂರಿನ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ(21) ಎಂಬಾತನೆ ಈಕೆಗೆ ಮೋಸಮಾಡಿದ ಯುವಕ.!
ಸಾಂದರ್ಭಿಕ ಚಿತ್ರ..

ಪುತ್ತೂರಿನ ಹೈಸ್ಕೂಲ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ ಪ್ರೇಮಾಂಕುರವಾಗಿತ್ತು. ಬಳಿಕ 2024ರ ಅಕ್ಟೋಬರ್ 11ರಂದು ಶ್ರೀಕೃಷ್ಣ ಮನೆಗೆ ಕರೆದು ದೈಹಿಕ ಸಂಪರ್ಕ ಬೆಳೆಸಿದ ಆರೋಪ ಮಾಡಿದ್ದಾಳೆ ಯುವತಿ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ನಿನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಅದಾದ ಬಳಿಕ 2025ರ ಜನವರಿ ತಿಂಗಳಿನಲ್ಲಿ ಮತ್ತೆ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದ. ಆ ಬಳಿಕ ಯುವತಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಇದು ಗೊತ್ತಾದ ಬಳಿಕ ಶ್ರೀಕೃಷ್ಣ ಮದುವೆಯಾಗಲು ನಿರಾಕರಿಸಿದ್ದಾನಂತೆ.! ಇದರಿಂದಾಗಿ ಪುತ್ತೂರು ಮಹಿಳಾ ಠಾಣೆಗೆ ಯುವತಿ ದೂರು ನೀಡಿದ್ದಳು. ಸದ್ಯ ಪ್ರಕರಣ ದಾಖಲಿಸಿಕೊಂಡು ಶ್ರೀಕೃಷ್ಣನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಶ್ರೀಕೃಷ್ಣ ಪುತ್ತೂರಿನ ಸ್ಥಳೀಯ ಬಿಜೆಪಿ ಮುಖಂಡನ ಪುತ್ರನಾಗಿದ್ದಾನೆ.
ಪುತ್ತೂರಿನ ನಿವಾಸಿಯಾಗಿರುವ ಯುವತಿ, ತಾನು ಮತ್ತು ಕೃಷ್ಣ ಹಲವು ವರ್ಷಗಳಿಂದ ಸಂಬಂಧದಲ್ಲಿದ್ದೇವೆ ಎಂದು ಹೇಳಿಕೊಂಡಿದ್ದಾಳೆ. ಕೃಷ್ಣ ತನ್ನ ನಂಬಿಕೆಯ ಲಾಭ ಪಡೆದು ತನ್ನ ಮನೆಯಲ್ಲಿ ಹಲವು ಬಾರಿ ದೈಹಿಕ ಸಂಪರ್ಕ ಹೊಂದಿದ್ದಾನೆ ಎಂದು ಆಕೆ ಆರೋಪಿಸಿದ್ದಾಳೆ. ಗರ್ಭಧಾರಣೆಯ ಬಗ್ಗೆ ತಿಳಿದ ನಂತರ, ಮಹಿಳೆ ತನ್ನ ಪೋಷಕರಿಗೆ ತಿಳಿಸಿದಳು, ನಂತರ ಅವರು ಕೃಷ್ಣನ ಕುಟುಂಬವನ್ನು ಸಂಪರ್ಕಿಸಿದ್ದರಂತೆ. ಕುಟುಂಬವು ಆರಂಭದಲ್ಲಿ ಮದುವೆಗೆ ಒಪ್ಪಿಕೊಂಡರೂ, ಕೃಷ್ಣ ಅಂತಿಮವಾಗಿ ನಿರಾಕರಿಸಿದ್ದ ಎನ್ನಲಾಗಿದೆ.
ಜೂನ್ 24 ರ ರಾತ್ರಿ ದಾಖಲಾದ ದೂರಿನ ಮೇರೆಗೆ ಪುತ್ತೂರು ಪೊಲೀಸರು ಕೃಷ್ಣ ರಾವ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 64 (1) ಮತ್ತು 69 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಸ್ತುತ ಶ್ರೀಕೃಷ್ಣ ತಲೆಮರೆಸಿಕೊಂಡಿದ್ದು, ಪೊಲೀಸರು ಆತನ ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಎಫ್ಐಆರ್ ಪ್ರಕಾರ, ಕೃಷ್ಣ ಅಕ್ಟೋಬರ್ 11 ರಂದು ಮಹಿಳೆಯನ್ನು ಮದುವೆಯಾಗುವ ನೆಪದಲ್ಲಿ ತನ್ನ ಮನೆಗೆ ಆಹ್ವಾನಿಸಿ ಬಲವಂತವಾಗಿ ಆಕೆಯ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದ. ಆಕೆ ವಿರೋಧಿಸಿದಾಗ, ಆಕೆಗೆ ಮದುವೆಯ ಭರವಸೆ ನೀಡಿ, ವಿಷಯವನ್ನು ರಹಸ್ಯವಾಗಿಡಲು ಹೇಳಿದ್ದ. ಜನವರಿಯಲ್ಲಿ, ಅವರು ಇದೇ ಕೃತ್ಯವನ್ನು ಪುನರಾವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.


