ಧರ್ಮಸ್ಥಳ : 2003ರಲ್ಲಿ ನನ್ನ ಪುತ್ರಿ “ಅನನ್ಯ ಭಟ್” ನಿಗೂಢವಾಗಿ ನಾಪತ್ತೆಯಾಗಿದ್ದಾಳೆ.! ಕಳೆಬರಹ ಸಿಕ್ಕರೆ ಬ್ರಾಹ್ಮಣಳಾಗಿ ಗೌರವದಿಂದ ಅಂತ್ಯಕ್ರಿಯೆ ಮಾಡ್ತುತ್ತೇನೆ, ವೃದ್ಧ ತಾಯಿ ಮನವಿ.!
news.ashwasurya.in
ಅಶ್ವಸೂರ್ಯ/ಧರ್ಮಸ್ಥಳ : ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡಿದ್ದ ವ್ಯಕ್ತಿಯೋರ್ವನ ಹೇಳಿಕೆ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದೆ.
ಅನನ್ಯ ಭಟ್ ತಾಯಿ ಸುಜಾತಾ ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡಿದ್ದ ವ್ಯಕ್ತಿಯೋರ್ವನ ಹೇಳಿಕೆ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದ್ದರಿಂದ ಇದರ ಬೆನ್ನಲ್ಲೆ 60 ವರ್ಷದ ಮಹಿಳೆಯೊಬ್ಬರು 2003ರಲ್ಲಿ ಧರ್ಮಸ್ಥಳದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಅಸ್ಥಿಪಂಜರದ ಅವಶೇಷಗಳನ್ನು ಪತ್ತೆಹಚ್ಚಲು ನೆರವಾಗುವಂತೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.
ಬೆಂಗಳೂರಿನ ಪದ್ಮನಾಭನಗರ ನಿವಾಸಿ ಮತ್ತು ಕೇಂದ್ರ ತನಿಖಾ ದಳದ (CBI) ನಿವೃತ್ತ ಸ್ಟೆನೋಗ್ರಾಫರ್ ಸುಜಾತಾ ಭಟ್ ತಮ್ಮ ದೂರಿನಲ್ಲಿ ತಮ್ಮ ಮಗಳು ಅಂದು ನಾಪತ್ತೆಯಾದ ಘಟನೆಗಳನ್ನು ವಿವರಿಸಿದ್ದಾರೆ. 2003ರಲ್ಲಿ ಮಣಿಪಾಲ ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದ ತಮ್ಮ ಪುತ್ರಿ ಅನನ್ಯಾ ಸ್ನೇಹಿತರೊಂದಿಗೆ ಧರ್ಮಸ್ಥಳ ದೇವಸ್ಥಾನಕ್ಕೆ ಹೋಗಿದ್ದಳು.ಅನನ್ಯಾ ಅವರ ಸಹಪಾಠಿ ರಶ್ಮಿ ಅವರಿಂದ ಸುಜಾತಾ ಅವರಿಗೆ ದುಃಖಕರ ಕರೆ ಬಂದಿತ್ತು. ಧರ್ಮಸ್ಥಳದಲ್ಲಿ ಅನನ್ಯಾ ಕಾಣೆಯಾಗಿದ್ದಾಳೆ ಎಂದು ಹೇಳಿದ್ದಳು.
ಸುಜಾತಾ ಕಾಲೇಜು ಹಾಸ್ಟೆಲ್ಗೆ ಸಂಪರ್ಕಿಸಿದಾಗ, ಅನನ್ಯಾ ಎರಡು ಮೂರು ದಿನಗಳಿಂದ ಕಾಣಲಿಲ್ಲ ಎಂದು ನನಗೆ ತಿಳಿಸಿದರು. ಹೀಗಾಗಿ ಕೋಲ್ಕತ್ತಾದಿಂದ ಧರ್ಮಸ್ಥಳಕ್ಕೆ ಬಂದ ಸುಜಾತಾ ತಮ್ಮ ಮಗಳ ಫೋಟೋವನ್ನು ಸ್ಥಳೀಯರು ಮತ್ತು ದೇವಾಲಯದ ಸಿಬ್ಬಂದಿಗೆ ತೋರಿಸುತ್ತಾ ಹುಡುಕಾಟ ನಡೆಸಿದರು. ಕೆಲವು ದಿನಗಳ ಹಿಂದೆ ಅನನ್ಯಾ ಅವರ ವಿವರಣೆಗೆ ಹೊಂದಿಕೆಯಾಗುವ ಯುವತಿಯೊಬ್ಬಳನ್ನು ದೇವಾಲಯದ ಸಿಬ್ಬಂದಿ ಕರೆದೊಯ್ದಿದ್ದನ್ನು ನೋಡಿದ್ದೇವೆ ಎಂದು ಕೆಲ ಸ್ಥಳೀಯರು ತನಗೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಔಪಚಾರಿಕ ದೂರು ದಾಖಲಿಸಲು ಸುಜಾತಾ ಮಾಡಿದ ಪ್ರಯತ್ನಗಳು ಸಫಲವಾಗಿರಲಿಲ್ಲವಂತೆ.!? ಅಧಿಕಾರಿಗಳು ನನ್ನ ದೂರನ್ನು ಸ್ವೀಕರಿಸಲು ನಿರಾಕರಿಸಿದರು. ಅಲ್ಲದೆ ನನ್ನ ಮಗಳೇ ಯಾರೊಂದಿಗೋ ಓಡಿಹೋಗಿರಬೇಕು ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ನನ್ನನ್ನು ಠಾಣೆಯಿಂದ ಹೊರಗೆ ಕಳುಹಿಸಿದರು ಎಂದು ಸುಜಾತಾ ಹೇಳಿದ್ದಾರೆ.