
ಬೆಂಗಳೂರು: ನಿವೇಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ ,ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರ…ಚಿ||ಕುಂ||ಸೌ|| ಅನುಶ್ರೀ

ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನ ಹೊರವಲಯದ ರೆಸಾರ್ಟ್ನಲ್ಲಿ ಹೆಸರಾಂತ ಕಿರುತೆರೆಯ ನಿರೂಪಕಿ ಅನುಶ್ರೀ ಅವರ ಮದುವೆ ನಡೆಯಲಿದ್ದು, ಅಂದು ಬೆಳಗ್ಗೆ 10.56ಕ್ಕೆ ಮಾಂಗಲ್ಯ ಧಾರಣೆ ಆಗಲಿದೆ. ಈಗಾಗಲೇ ಆಪ್ತರಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಲಾಗಿದ್ದು, ಮೀಡಿಯಾದಲ್ಲಿ ವೈರಲ್ ಆಗಿದೆ.
ಆ್ಯಂಕರ್ ಅನುಶ್ರೀ- ರೋಷನ್ ಮದುವೆ ಆಮಂತ್ರಣದಲ್ಲಿ ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರ ಎಂದು ಬರೆಯಲಾಗುದೆ.

ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಅಣಿಯಾಗಿದ್ದಾರೆ. ಈ ಬಗ್ಗೆ ಕೆಲವೇ ದಿನಗಳ ಹಿಂದೆ ಸುದ್ದಿ ಹೊರಬಿದ್ದಿತ್ತು. ಕೊಡಗು ಮೂಲದ ರೋಷನ್ ಜೊತೆ ಆ್ಯಂಕರ್ ಅನುಶ್ರೀ ಅವರು ಹಸೆಮಣೆ ಏರಲಿದ್ದಾರೆ. ಮದುವೆಗೆ ದಿನಾಂಕ ಕೂಡ ನಿಗದಿ ಆಗಿದೆ. ಆಗಸ್ಟ್ 28ರಂದು ಅನುಶ್ರೀ ಮತ್ತು ರೋಷನ್ ಅವರ ಮದುವೆ ನಡೆಯಲಿದೆ. ಈಗಾಗಲೇ ಆಪ್ತರಿಗೆ ಮದುವೆ ಆಮಂತ್ರಣ ಪತ್ರಿಕೆ ತಲುಪಿದೆ. ಅನುಶ್ರೀ ಮದುವೆಯ ಆಹ್ವಾನ ಪತ್ರಿಕೆ ತುಂಬಾ ಸರಳವಾಗಿದೆ. ಬರೆದ ಒಂದೆರಡು ಸಾಲುಗಳು ವಿಷೇಶವಾಗಿದೆ.

“ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ. ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿ ಆಗುವ ಹೊಸ ಮನ್ವಂತರ” ಎಂದು ಆಹ್ವಾನ ಪತ್ರಿಕೆಯಲ್ಲಿ ಬರೆಯಲಾಗಿದೆ. ಆ.28ಕ್ಕೆ ರೋಷನ್ ಜೊತೆ ನಿರೂಪಕಿ ಅನುಶ್ರೀ ಸಪ್ತಪದಿ ತುಳಿಯಲಿದ್ದಾರೆ. ಅಂದು ಬೆಳಗ್ಗೆ 10.56ಕ್ಕೆ ಮಾಂಗಲ್ಯ ಧಾರಣೆ ಆಗಲಿದೆ. ಬೆಂಗಳೂರಿನ ಹೊರವಲಯದ ರೆಸಾರ್ಟ್ನಲ್ಲಿ ಮದುವೆ ನಡೆಯಲಿದೆ.

ಪುನೀತ್ ರಾಜ್ಕುಮಾರ್ ಜೋತೆಯಲ್ಲಿ ಅನುಶ್ರೀ
ಬಣ್ಣದ ಲೋಕದಲ್ಲಿ ಅನುಶ್ರೀ ಅವರು ಹಲವು ವರ್ಷಗಳಿಂದ ಗಿರುತಿಸಿಕೊಂಡು ಸಾಕಷ್ಟು ಎತ್ತರಕ್ಕೆ ಬೆಳೆದಿದು ಜನಪ್ರಿಯತೆ ಗಳಿಸಿದ್ದಾರೆ. ಕಿರುತೆರೆಯ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಹಲವು ವೇದಿಕೆ ಕಾರ್ಯಕ್ರಮಗಳ ನಿರೂಪಣೆ ಕೂಡ ಮಾಡಿದ್ದಾರೆ. ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ. ಚಿತ್ರರಂಗದಲ್ಲಿ ಹಾಗೂ ರಾಜಕೀಯ ರಂಗದಲ್ಲಿ ಅವರ ಸ್ನೇಹಿತರ ಬಳಗ ಸಾಕಷ್ಟಿದೆ. ಹಾಗಾಗಿ ಮದುವೆಗೆ ಅನೇಕ ಗಣ್ಯರು ಹಾಜರಾಗಲಿದ್ದಾರೆ.
ಅನುಶ್ರೀ ಅವರ ಮದುವೆ ಯಾವಾಗ ಎಂಬ ಪ್ರಶ್ನೆ ಆಗಾಗ ಕೇಳಿಬರುತ್ತಿತ್ತು. ಅದಕ್ಕೆ ತಕ್ಕಂತೆಯೇ ಸೋಶಿಯಲ್ ಮೀಡಿಯಾದಲ್ಲಿ ಹಲವು ಅಂತೆ-ಕಂತೆಗಳು ಹರಿದಾಡುತ್ತಿದ್ದವು. ಈ ಮೊದಲು ಕೂಡ ಅನುಶ್ರೀ ಮದುವೆ ಬಗ್ಗೆ ಕೆಲವು ಗಾಸಿಪ್ ಹಬ್ಬಿದ್ದವು. ಆದರೆ ಅವು ನಿಜವಾಗಲಿಲ್ಲ. ಈ ಬಾರಿ ಮದುವೆಯ ಸುದ್ದಿ ಖಚಿತವಾಗಿದೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಈ ಮೊದಲು ನಡೆದ ಕಾರ್ಯಕ್ರಮವೊಂದರಲ್ಲಿ ಅನುಶ್ರೀ ಮತ್ತು ರೋಷನ್ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದರು. ಪೂಜೆ ಮಾಡಿಸುವಾಗ ಕೆಲವರು ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಎಲ್ಲ ಕಡೆಗಳಲ್ಲಿ ಅದು ವೈರಲ್ ಆಯಿತು. ಈ ಫೋಟೋ ಫ್ಯಾನ್ ಪೇಜ್ಗಳಲ್ಲಿ ಹರಿದಾಡುತ್ತಿದೆ.



