
ಚಿಕ್ಕಬಳ್ಳಾಪುರ : ಸಾಲದ EMI ಹಣ ಕಟ್ಟಲು ಸ್ನೇಹಿತೆಯನ್ನೆ ಕೊಂದು ಮುಗಿಸಿ ಮಾಂಗಲ್ಯ ಸರ ಕದ್ದ ಖತರ್ನಾಕ್ ಸ್ನೇಹಿತ.!

news.ashwasurya.in

ಅಶ್ವಸೂರ್ಯ/ಚಿಕ್ಕಬಳ್ಳಾಪುರ: ಚಾಲಕಿ ಆಟೋ ಚಾಲಕನೊಬ್ಬ ತನ್ನ ಬೆನ್ನಿಗೆ ನಿಂತ ಗೆಳತಿಯನ್ನೆ ಹಣಕ್ಕಾಗಿ ಕೊಂದು ಮುಗಿಸಿದ್ದಾನೆ.!
ತಾನು ಆಟೋ ಖರೀದಿಸಲು ಚಾಲಕನೊರ್ವ ಸಾಲಮಾಡಿದ್ದ. ಆಟೋ ಇಎಂಎ ಸಾಲ ತೀರಿಸಲು ಚಾಲಕ ಖತರ್ನಾಕ್ ಸ್ಕೆಚ್ ಹಾಕಿ ತನ್ನಿಬ್ಬರು ಸ್ನೇಹಿತೆಯರನ್ನೇ ಬಳಸಿಕೊಂಡು ದೊಡ್ಡದೊಂದು ಪ್ಲಾನ್ ಮಾಡಿ ತನ್ನ ಹಳೆಯ ಸ್ನೇಹಿತೆಯನ್ನೇ ಕೊಲೆಮಾಡಿದ ಪ್ರಕರಣವೊಂದು ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.ಖತರ್ನಾಕ್ ಆಟೋ ಚಾಲಕ ಈಗ ಪೊಲೀಸರು ಅತಿಥಿ ಆಗಿದ್ದಾನೆ. ಈ ಘಟನೆ ಬೆಳಕಿಗೆ ಬಂದದ್ದು ಆಗಸ್ಟ್ 16 ರಂದು,

ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಮಗೊಂಡ್ಲು ಗ್ರಾಮದ ಸೇತುವೆಯೊಂದರ ಬಳಿ ಅಪರಿಚಿತ ಮಹಿಳೆಯ ಶವವೊಂದು ಪತ್ತೆಯಾಗಿತ್ತು.? ಅಪರಿಚಿತ ಶವದ ಮಾಹಿತಿ ಕಲೆಹಾಕಲು ಕಾರ್ಯಚರಣೆಗೆ ಇಳಿದ ಪೊಲೀಸರಿಗೆ ಕಾಣೆಯಾದ ಮಹಿಳೆಯರ ಪ್ರಕರಣಗಳ ಹುಡುಕಾಟ ನಡೆಸಿದಾಗ ಆಕೆ ಆಂಧ್ರದ ಹಿಂದೂಪುರದ ಅರ್ಚನಾ ಎಂಬುದು ಗೊತ್ತಾಗಿದೆ. ಹಿಂದೂಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬಳು ಕಾಣೆಯಾದ ಪ್ರಕರಣವೊ ದಾಖಲಾಗಿತ್ತು.
ಗೌರಿಬಿದನೂರು ಸಿಪಿಐ ಸತ್ಯನಾರಾಯಣ್ ಹಾಗೂ ಮಂಚೇನಹಳ್ಳಿ ಪಿಎಸ್ಐ ಆಕೆಯ ಸಿಡಿಆರ್ ಪರಿಶೀಲನೆ ಮಾಡಿದಾಗ ಕಾಣೆಯಾದ ದಿನದಂದು ಆರ್ಚನಾಳಿಗೆ ರಾಕೇಶ್ ಎಂಬಾತ ಹಲವು ಬಾರಿ ಕರೆ ಮಾಡಿರೋದು ಗೊತ್ತಾಗಿದೆ. ಹೀಗಾಗಿ ಮೂಲತಃ ಗೌರಿಬಿದನೂರಿನ ವಿರೂಪಸಂದ್ರದ ವ್ಯಕ್ತಿ ಬೆಂಗಳೂರಿನಲ್ಲಿ ಆಟೋ ಚಾಲಕನಾಗಿರುವ ರಾಕೇಶ್ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.ಪೊಲೀಸರ ವಿಚಾರಣೆಯ ವೇಳೆ ಚಾಲಕಿ ಆಟೋ ಚಾಲಕ ರಾಕೇಶ್ ತನ್ನ ಆಟೋ ಸಾಲದ ಇಎಂಐ ಹಣವನ್ನು ಕಟ್ಟಲು ಮೂರು ತಿಂಗಳಿಂದ ಸಾಧ್ಯವಾಗಿರಲಿಲ್ಲ.! ಹಾಗೂ ಬೈಕ್ ಮೇಲೆ 30,000 ಸಾಲ ಮಾಡಿದ್ದು, ಅದು ಸಹ ತೀರಿಸಲು ಹಣ ಇಲ್ಲದಂತಾಗಿತ್ತು ಜೋತೆಗೆ ಕೈ ಸಾಲ ಬೇರೆ ಮಾಡಿಕೊಂಡಿದ್ದು ಸಾಲಗಾರನಾಗಿದ್ದು ಸಾಲ ತೀರಿಸಲು ಸ್ನೇಹಿತೆಯನ್ನೆ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಕೊಲೆಯಾದ ಅರ್ಚನಾ ಶುಭಸಮಾರಂಭಗಳಲ್ಲಿ ಮದುವೆ ಮನೆಗಳಲ್ಲಿ ಸ್ವಾಗತಕಾರಳಾಗಿ ಕೆಲಸ ಮಾಡುತ್ತಿದ್ದರಂತೆ. ಹಲವು ವರ್ಷಗಳ ಹಿಂದೆ ಅರ್ಚನಾಳನ್ನು ಹತ್ಯೆಮಾಡಿದ ಆಟೋ ಚಾಲಕ ಕೂಡ ಮದುವೆ ಮನೆಗಳಲ್ಲಿ ಆಡುಗೆ ಕೆಲಸ ಮಾಡಿಕೊಂಡಿದ್ದನಂತೆ. ಅಂದಿನಿಂದಲೂ ಅರ್ಚನಾ ಹಾಗೂ ರಾಕೇಶ್ ಅಣ್ಣ ತಂಗಿಯ ಸಂಬಂಧದಂತೆ ಸ್ನೇಹಿತರಾಗಿದ್ದರಂತೆ. ಇತ್ತೀಚೆಗೆ ವಿಡಿಯೋ ಕಾಲ್ ಮಾಡಿ ಮಾತನಾಡುವ ಸಂಧರ್ಭದಲ್ಲಿ ರಾಕೇಶ್ ಅರ್ಚನಾಳ ಕತ್ತಿನಲ್ಲಿ ಹೊಳೆಯುತ್ತಿದ್ದ ಮಾಂಗಲ್ಯ ಸರದ ಮೇಲೆ ಕಣ್ಣು ಹಾಕಿದ್ದಾನೆ. ಇದನ್ನು ಹೇಗಾದರೂ ಪಡೆದುಕೊಳ್ಳುವ ಯೋಚನೆಗೆ ಬಿದ್ದವನು ಬೆಂಗಳೂರಿನಲ್ಲಿ ಪರಿಚಯವಾಗಿದ್ದ ತನ್ನ ಮತ್ತೊಬ್ಬಳು ಸ್ನೇಹಿತೆ ನಿಹಾರಿಕಾ ಬಳಿ ತನ್ನ ಕಷ್ಟ ಹೇಳಿಕೊಂಡಿದ್ದನಂತೆ. ತಾನು ಸಿಕ್ಕಾಪಟ್ಟೆ ಸಾಲ ಮಾಡಿಕೊಂಡಿದ್ದೇನೆ. ಆಟೋ ಇಎಂಐ ಸಹ ಕಟ್ಟಿಲ್ಲ, ಹಾಗಾಗಿ ನನ್ನ ಫ್ರೆಂಡ್ ಅರ್ಚನಾ ಹತ್ರ ಚಿನ್ನದ ಸರ ಇದೆ ಅವಳನ್ನ ಸಾಯಿಸಿ ಆದ್ರೂ ಸರ ಕದ್ದು ಸಾಲ ತೀರಿಸಬೇಕು ನೀನು ನನಗೆ ಸಹಾಯ ಮಾಡು ಅಂತ ಕೇಳಿಕೊಂಡಿದ್ದನಂತೆ.

ನಿಹಾರಿಕಾ ನಾನು ಬರೋಕೆ ಆಗಲ್ಲ ನನ್ನ ಪ್ರಾಣ ಸ್ನೇಹಿತೆ ಅಂಜಲಿ ಅಂತಾ ಇದ್ದಾಳೆ ಅವಳನ್ನ ಕರೆದುಕೊಂಡು ಹೋಗು ಅಂತ ಅಂಜಲಿನಾ ಕಳಿಸಿಕೊಟ್ಟಿದ್ದಾಳೆ. ಇನ್ನೂ ಅಂಜಲಿ ತಾನೊಬ್ಬಳೇ ಯಾಕೆ ಅಂತ ತನ್ನ ಸ್ನೇಹಿತ ನವೀನ್ ಎಂಬಾತನನ್ನ ಸಹ ಕರೆದುಕೊಂಡು ಬಂದು ಕೊಲೆ ಮಾಡಿದ್ದಾರೆ. ರಾಕೇಶ್ ಆಟೋದಲ್ಲಿ ಕೊಲೆ ಮಾಡಲು ಸಾಧ್ಯವಿಲ್ಲ ಕಾರಿನಲ್ಲಿ ಆದ್ರೆ ಹತ್ಯೆಮಾಡಲು ಸುಲಭ ಅಂತ ಯೋಚನೆ ಮಾಡಿ, ಅಂಜಲಿ ವಾಸವಿದ್ದ ಪಿಜಿ ಮಾಲೀಕಿಗೆ ಸ್ನೇಹಿತೆಯನ್ನು ನೊಡೋಕೆ ಹಿಂದೂಪುರಕ್ಕೆ ಹೋಗಿ ಬರ್ತಿವಿ ಅಂತ ಪಿಜಿ ಮಾಲೀಕಿಯ ಇಟಿಯೋಸ್ ಕಾರನ್ನ ತೆಗೆದುಕೊಂಡು ಹೋಗಿದ್ದ ಆರೋಪಿ ರಾಕೇಶ್.
ಆಗಸ್ಟ್ 14 ರಂದು ಬೆಂಗಳೂರಿನಿಂದ ರಾಕೇಶ್, ಅಂಜಲಿ ಹಾಗೂ ನವೀನ್ ಮೂವರು ಸೀದಾ ಹಿಂದೂಪುರಕ್ಕೆ ಹೋಗಿ ಅರ್ಚನಾಳನ್ನ ಬಾ ಊಟಕ್ಕೆ ಹೋಗಿ ಬರೋಣ ಅಂತ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಕಾರು ಹತ್ತಿಸಿಕೊಂಡಿದ್ದಾರೆ. ರಾಕೇಶ್ ಹಾಗೂ ಎಲ್ಲರೂ ಹಿಂದೂಪುರದಲ್ಲೇ ಫೋನ್ಗಳನ್ನ ಸ್ವಿಚ್ ಅಫ್ ಮಾಡಿಕೊಂಡಿದ್ದಾರೆ. ಹಿಂದೂಪುರದಿಂದ ಆರಂಭವಾದ ಕಾರು ಜರ್ನಿ ಗೌರಿಬಿದನೂರು ಮಂಚೇನಹಳ್ಳಿ ಮಾರ್ಗವಾಗಿ ಚಿಕ್ಕಬಳ್ಳಾಪುರ ಹಾಗೂ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಂಜೆಯವರೆಗೂ ಸಾಗಿದ್ದು ಸಂಜೆ ಕತ್ತಲಾಗುತ್ತಿದ್ದಂತೆ ಆಂಧ್ರದ ಚಿಲಮತ್ತೂರು ಬಳಿ ಕಾರಿನಲ್ಲಿದ್ದ ಅರ್ಚನಾಳ ಕುತ್ತಿಗೆಗೆ ವೇಲ್ ನಿಂದ ಬಿಗಿದು ಕೊಲೆ ಮಾಡಿ ಮೃತದೇಹವನ್ನ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಮಗೊಂಡ್ಲು ಗ್ರಾಮದ ಬಳಿ ದೊಡ್ಡ ಸೇತುವೆಯೊಂದರ ಬಳಿ ಬಿಸಾಕಿ ಪರಾರಿಯಾಗಿದ್ದರು ಹಂತಕರು.!

ಅರ್ಚನಾಳನ್ನ ಕೊಲೆ ಮಾಡಿ ಕದ್ದಿದ್ದ ಮಾಂಗಲ್ಯಸರ ಹಾಗೂ ಬಂಗಾರದ ಕಿವಿಯ ಒಲೆಯನ್ನ ಫೈನಾನ್ಸ್ ಒಂದರಲ್ಲಿ 2.19 ಲಕ್ಷ ರೂ.ಗೆ ಅಡಮಾನ ಇಟ್ಟಿದ್ದರು. ಬಂದ ಹಣದಿಂದ ಆಟೋ ಇಎಂಐ ಹಾಗೂ ಕೈ ಸಾಲ ತೀರಿಸಿ ಉಳಿದ ಹಣದಲ್ಲಿ ಎಲ್ಲರೂ ಮೋಜು ಮಸ್ತಿ ಮಾಡಿಕೊಂಡಿದ್ದರು. ಈಗ ಆರೋಪಿಗಳಾದ ರಾಕೇಶ್ ಹಾಗೂ ಅಂಜಲಿಗೆ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳಾದ ನವೀನ್ ಹಾಗೂ ನಿಹಾರಿಕಾ ಎಸ್ಕೇಪ್ ಆಗಿದ್ದು ಅವರ ಬಂಧನಕ್ಕಾಗಿ ಪೊಲೀಸರು ಕಾರ್ಯಚರಣೆಗೆ ಇಳಿದಿದ್ದಾರೆ.
ಒಟ್ಟಿನಲ್ಲಿ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರ ಕದಿಯಲು ಹೊಂಚುಹಾಕಿದ ಹಂತಕರ ಗ್ಯಾಂಗ್ ಅರ್ಚಾನಾಳ ಕುತ್ತಿಗೆಯನ್ನೆ ಹಿಸುಕಿ ಮಾಂಗಲ್ಯ ಸರವನ್ನು ಕದ್ದು ಬಂಗಾರದಂತ ಜೀವನದ ಕನಸು ಕಂಡಿದ್ದ ಅರ್ಚನಾಳ ಬದುಕನ್ನೇ ಅಂತ್ಯವಾಗಿಸಿದ್ದಾರೆ….


