ಉಡುಪಿ: ನನ್ನನ್ನು ಬಂಡೆ ಎನ್ನುತ್ತಾರೆ- ನೀವು ಯಾವ ರೀತಿ ಬೇಕಾದರೂ ಬಳಸಿಕೊಳ್ಳಿ.! ಡಿಸಿಎಂ ಡಿಕೆ

ನಮ್ಮ ಧರ್ಮ ಮನುಷ್ಯನಿಗೆ ಆತ್ಮ ವಿಶ್ವಾಸ ಹೆಚ್ಚಿಸುವ ದಾರಿ. ಈ ವೇದಿಕೆ ಮೇಲೆ ಶ್ರೀಗಳು ಮೂರ್ನಾಲ್ಕು ಪುಸ್ತಕ ನೀಡಿದರು. ಅವರು ವಿಶ್ವಸಂಸ್ಥೆಯಲ್ಲಿ ಮಾಡಿದ ಭಾಷಣವನ್ನು ನೋಡಿದೆ. ಆ ಭಾಷಣದಲ್ಲಿ ಅವರು, ‘ನಾವು ಧರ್ಮಕ್ಕೆ ಅಂಟಿಕೊಂಡಿರಬಾರದು. ಬಂಧಿಸಲ್ಪಡಬಾರದು.ಎಂದು ತಿಳಿಸಿದ್ದಾರೆ.
news.ashwasurya.in
ಉಡುಪಿಯ ಪುತ್ತಿಗೆ ಮಠಕ್ಕೆ ಭೇಟಿ ನೀಡಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಸ್ವಾಮೀಜಿ ಅವರು ಡಿಸಿಎಂಗೆ ಆಶೀರ್ವದಿಸಿದ್ದಾರೆ. ರಾಜ್ಯಕ್ಕೆ ದೇಶಕ್ಕೆ ಅವರ ಸೇವೆ ದೊರಕಲಿ. ಭಗವದ್ಗೀತೆ ಪುಸ್ತಕ ಪಡೆದಿದ್ದಾರೆ, ಅವರ ಮನಸ್ಸಿನ ಇಚ್ಛೆ ಫಲಿಸಲಿ ಎಂದು ಉಡುಪಿಯ (Udupi) ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಾದ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಓಪನ್ ಆಗಿ ಭಗವದ್ಗೀತೆ ಪಠಿಸುವ ಏಕೈಕ ರಾಜಕಾರಣಿ ಎಂದು ಅವರು ಹೇಳಿದ್ದಾರೆ.
ಅಶ್ವಸೂರ್ಯ/ಉಡುಪಿ : ಉಡುಪಿ ಶ್ರೀ ಕೃಷ್ಣ ಮಠದ ಕಾರ್ಯಕ್ರದಲ್ಲಿ ಮಾತನಾಡುತ್ತಾ ಡಿಸಿಎಂ ಡಿಕೆ. ನನ್ನನ್ನು “ಬಂಡೆ” ಎನ್ನುತ್ತಾರೆ – ನೀವು ಯಾವ ರೀತಿ ಬೇಕಾದರೂ ಬಳಸಿಕೊಳ್ಳಿ: ನನ್ನ ಬಾಯಿಂದ ಯಾವುದೇ ತಪ್ಪು ನುಡಿಸದಂತೆ ಕೃಷ್ಣ ಪರಮಾತ್ಮನಲ್ಲಿ ಪ್ರಾರ್ಥನೆ”
ಕೆಲವರು ನನ್ನನ್ನು ಬಂಡೆ ಎಂದು ಕರೆಯುತ್ತಾರೆ. ಬಂಡೆ ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ನೀವು ಬಂಡೆಯಿಂದ ಮೆಟ್ಟಿಲು, ಆಧಾರ ಸ್ತಂಭ, ಜಲ್ಲಿ, ವಿಗ್ರಹ ಮಾಡಬಹುದು. ಅದೇ ರೀತಿ ನೀವು ನನ್ನನ್ನು ಹೇಗೆ ಬೇಕಾದರೂ ಬಳಸಿಕೊಳ್ಳಬಹುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ಭಾಷಣದಲ್ಲಿ ಹೇಳಿದರು..

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಮಠಾಧೀಶರಾದ ಶ್ರೀ ಸುಗಣೇಂದ್ರತೀರ್ಥ ಶ್ರೀಪಾದರ 64ನೇ ಜನ್ಮನಕ್ಷತ್ರೋತ್ಸವ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. ನಾನು ಏನು ಮಾತನಾಡಿದರೂ ಅದರಲ್ಲಿ ತಪ್ಪು ಕಂಡು ಹಿಡಿಯುವುದೇ ಹೆಚ್ಚಾಗಿದೆ. ಹೀಗಾಗಿ ನನ್ನ ಬಾಯಿಂದ ಯಾವುದೇ ತಪ್ಪು ನುಡಿಸದಂತೆ ಶ್ರೀಕೃಷ್ಣ ಪರಮಾತ್ಮನಲ್ಲಿ ಪ್ರಾರ್ಥಿಸುತ್ತೇನೆ.

ಶ್ರೀಕೃಷ್ಣನ ದಿವ್ಯ ದರ್ಶನ ಮಾಡಿ ಶ್ರೀಗಳ ಜೊತೆಯಲ್ಲಿ ಮಧ್ವಾಚಾರ್ಯರ ಅಂಚೆಚೀಟಿ ಬಿಡುಗಡೆ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ ಎಂದು ಭಾವಿಸುತ್ತೇನೆ ಎಂದು ತಿಳಿಸಿದರು.
ಧರ್ಮ, ಪೂಜೆ, ಭಕ್ತಿ ಪ್ರದರ್ಶನಕ್ಕಿರುವ ವಸ್ತುಗಳಲ್ಲ. ಎಲ್ಲರ ಆಚಾರ ವಿಚಾರಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕಿರುವುದು ನಮ್ಮ ಕರ್ತವ್ಯ. ನಾನು ಅನೇಕ ಬಾರಿ ಕೃಷ್ಣನ ಮಠಕ್ಕೆ ಹಾಗೂ ಕೃಷ್ಣನ ದಿವ್ಯ ಸಾನಿಧ್ಯಕ್ಕೆ ಬಂದಿದ್ದೇನೆ. ಶ್ರೀಗಳು ನನಗೆ ಕೃಷ್ಣನ ವಿಶ್ವರೂಪ ದರ್ಶನ ತೋರಿಸಿದರು. ನಾನು ಬಂಧಿಖಾನೆ ಸಚಿವನಾಗಿದ್ದಾಗಲೂ ನನಗೆ ಮಠದಿಂದ ಆಹ್ವಾನ ಬಂದಿತ್ತು. ಈ ವಿಶ್ವರೂಪ ದರ್ಶನವನ್ನು ನೋಡಿದಾಗ ನನಗೆ ನನ್ನ 50-60 ವರ್ಷಗಳ ಬದುಕಿನ ನೆನಪು ತಲೆಯಲ್ಲಿ ಸುಳಿದವು.
ನಮ್ಮ ಧರ್ಮ ಮನುಷ್ಯನಿಗೆ ಆತ್ಮ ವಿಶ್ವಾಸ ಹೆಚ್ಚಿಸುವ ದಾರಿ. ಈ ವೇದಿಕೆ ಮೇಲೆ ಶ್ರೀಗಳು ಮೂರ್ನಾಲ್ಕು ಪುಸ್ತಕ ನೀಡಿದರು. ಅವರು ವಿಶ್ವಸಂಸ್ಥೆಯಲ್ಲಿ ಮಾಡಿದ ಭಾಷಣವನ್ನು ನೋಡಿದೆ. ಆ ಭಾಷಣದಲ್ಲಿ ಅವರು, ‘ನಾವು ಧರ್ಮಕ್ಕೆ ಅಂಟಿಕೊಂಡಿರಬಾರದು. ಬಂಧಿಸಲ್ಪಡಬಾರದು. ಬದಲಾಗಿ ನಾವು ಬಯಸಿ ಇಚ್ಛಿಸುವ ಧರ್ಮವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದಿದ್ದಾರೆ. ನಾನು ಅವರ ಮಾತುಗಳನ್ನು ಒಪ್ಪುತ್ತೇನೆ ಎಂದು ಹೇಳಿದರು.

ಧರ್ಮ ಯಾವುದಾದರೂ ತತ್ವವೊಂದೇ. ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿಯೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೆ. ದೇವನೊಬ್ಬ ನಾಮ ಹಲವು. ನಾವು ಅನೇಕ ಹೆಸರಿನಲ್ಲಿ ದೇವರನ್ನು ಕರೆಯುತ್ತಿದ್ದೇವೆ. ನಾವು ಶಿವ, ಕೃಷ್ಣನನ್ನು ಬೇರೆ ಬೇರೆ ಹೆಸರಿನಲ್ಲಿ ಕರೆಯುತ್ತಾ ಬಂದಿದ್ದೇವೆ. ನಾವು ಕೃಷ್ಣನನ್ನು ಯಾಕೆ ಇಷ್ಟು ಪ್ರೀತಿಯಿಂದ ಒಪ್ಪುತ್ತೇವೆ ಎಂದರೆ ಕೃಷ್ಣ ಒಬ್ಬ ಶಿಕ್ಷಕ, ಮಾರ್ಗದರ್ಶಕ, ಚಿಂತಕ, ರಾಜಕಾರಣಿ, ಪ್ರೇಮಿ, ತತ್ವಜ್ಞಾನಿ ಎಂದು ಡಿಕೆ ಶಿವಕುಮಾರ್ ತಿಳಿಸಿದರು.


