
ಚಿಕ್ಕಬಳ್ಳಾಪುರ : ಪ್ರೀತಿಯ ತಂದೆಯನ್ನು ಕಳೆದುಕೊಂಡ ನೋವಿನಲ್ಲಿ ಮನನೊಂದು ಮಗಳೂ ಆತ್ಮಹತ್ಯೆ ಶರಣು.!

news.ashwasurya.in
ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಲ್ಲಿ ಎಂಎಸ್ಸಿ ಓದುತ್ತಿದ್ದ
ಚಿಕ್ಕಬಳ್ಳಾಪುರದ ಸ್ವರ್ಣ ತಂದೆಯ ಸಾವಿನಿಂದ ಮನನೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಗೌರಿಬಿದನೂರು ನಗರದ ನಾಗಿರೆಡ್ಡಿ ಬಡಾವಣೆಯ 22 ವರ್ಷದ ಸ್ವರ್ಣ ಮೃತ ಯುವತಿ. ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಎಂಎಸ್ಸಿ ಪದವಿ ವ್ಯಾಸಂಗ ಮಾಡುತ್ತಿರುವ ಸ್ವರ್ಣ ಕಾಲೇಜಿನ ಹಾಸ್ಟೆಲ್ನಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು.

ಮನೆಗೆ ಬಂದಿದ್ದ ಮಗಳನ್ನು ತಾಯಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗಳು ಸ್ವರ್ಣ ಸಾವನ್ನಪ್ಪಿದ್ದಾಳೆ. ಈಕೆಯ ತಂದೆ ಕೂಡ ಕಳೆದ 3 ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಅಂದಿನಿಂದಲೂ ಮಾನಸಿಕವಾಗಿ ಕುಗ್ಗಿ ಹೋಗಿ ಕಿನ್ನೆತೆಗೆ ಓಳಗಾಗಿದ್ದ ಸ್ವರ್ಣ ಸೂಸೈಡ್ ಮಾಡಿಕೊಂಡು ಈಗ ತಂದೆಯ ಹಾದಿಯಲ್ಲೆ ಸಾವಿನಮನೆಗೆ ಹೆಜ್ಜೆಹಾಕಿದ್ದಾಳೆ.!
ಇನ್ನೂ ಒಂದು ಕಡೆ ಗಂಡ ಮತ್ತೊಂದು ಕಡೆ ಮಗಳು ಆತ್ಮಹತ್ಯೆಗೆ ಶರಣಾಗಿರುವುದರಿಂದ ಇರುವ ಮಗನೊಂದಿಗೆ ತಾಯಿ ದಿಕ್ಕು ಕಾಣದಂತಾಗಿದ್ದಾರೆ. ಅಕ್ಕನ ಸಾವಿನಿಂದ ತಮ್ಮ ಸಹ ಕುಗ್ಗಿ ಹೋಗಿದ್ದು ತಾಯಿಗೆ ಆತಂಕ ಭಯ ಮೂಡಿಸಿದೆ. ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ ಪೊಲೀಸರು ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ಮೃತ ಸ್ವರ್ಣ ತಾಯಿ ಬಳಿ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.


