Headlines

ಬೆಂಗಳೂರು : ಕಾರಿನ ಮಿರರ್‌ಗೆ ಯುವಕನ ಬೈಕ್ ಟಚ್‌.! ಚೇಸ್‌ ಮಾಡಿ ಬೈಕ್‌ಗೆ ಗುದ್ದಿಸಿ ಯುವಕನ ಕೊಲೆ.! ದಂಪತಿ ಬಂಧನ.

ಕಾರಿನ ಮಿರರ್‌ಗೆ ಹೊಡೆದು ಹೋದರು ಎಂಬ ಕಾರಣಕ್ಕೆ ಕೋಪಗೊಂಡು 2 ಕಿ.ಮೀ. ವರೆಗೆ ಹಿಂಬಾಸಿಕೊಂಡು ಹೋಗಿ ಈ ದಂಪತಿ ಬೈಕ್‌ವೊಂದಕ್ಕೆ ಡಿಕ್ಕಿ ಹೊಡೆದಿದ್ದರು. ಕಾರು ಗುದ್ದಿದ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ರಸ್ತೆಯಲ್ಲಿ ಹಾರಿ ಬಿದ್ದಿದ್ದಾರೆ. ಬೈಕ್‌ನಲ್ಲಿದ್ದ ದರ್ಶನ್‌ ಮತ್ತು ವರುಣ್‌ಗೆ ಗಂಭೀರ ಗಾಯಗಳಾಗಿದ್ದವು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ದರ್ಶನ್‌ ಮೃತಪಟ್ಟಿದ್ದ. ಅ.25ರ ರಾತ್ರಿ ಪುಟ್ಟೇನಹಳ್ಳಿಯ ಶ್ರೀರಾಮ ಲೇಔಟ್‌ನಲ್ಲಿ ಈ ಘಟನೆ ನಡೆದಿತ್ತು.

ಮೊದಲು ಜೆಪಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪಘಾತ ಎಂದು ಕೇಸ್ ದಾಖಲಾಗಿತ್ತು. ತನಿಖೆ ವೇಳೆ ಕೊಲೆ ಎಂದು ಪತ್ತೆಯಾಗಿದೆ. ಘಟನೆ ಬಳಿಕ ದಂಪತಿ ಕಾರಿನಲ್ಲಿ ಎಸ್ಕೇಪ್‌ ಆಗಿದ್ದರು. ಘಟನೆಯಾದ ಕೆಲ ಸಮಯದ ನಂತರ ವಾಪಸ್‌ ಸ್ಥಳಕ್ಕೆ ದಂಪತಿ ಬಂದಿದ್ದರು. ಕಾರಿನ ಕೆಲ ಪಾರ್ಟ್ಸ್‌ಗಳು ನೆಲಕ್ಕೆ ಬಿದ್ದಿದ್ದವು. ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಂದು ಸಾಕ್ಷಿ ನಾಶ ಮಾಡುವ ಕೆಲಸ ಮಾಡಿದ್ದರು. ಸದ್ಯ ಕೇಸ್ ದಾಖಲು ಮಾಡಿ ಆರೋಪಿಗಳನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!