Headlines

ಬೆಂಗಳೂರು : ಲಂಚದ ಹಣಕ್ಕೆ ಬೇಡಿಕೆ ಇಟ್ಟ ಇನ್ಸ್‌ಪೆಕ್ಟರ್ ಅಮಾನತು.! ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಖಡಕ್ ಆದೇಶ.

ಬೆಂಗಳೂರಿನಲ್ಲಿ ಭಾರತ್ ಪೆಟ್ರೋಲಿಯಂ ನಿಗಮದ ನಿವೃತ್ತ ಸಿಎಫ್​ಒ ಶಿವಕುಮಾರ್ ಅವರ ಮಗಳ ಸಾವಿನ ನಂತರದ ಪ್ರತಿಯೊಂದು ಹಂತದಲ್ಲೂ ಲಂಚಕ್ಕಾಗಿ ಅಧಿಕಾರಿಗಳು ಪೀಡಿಸಿದ್ದರು. ಈ ಬಗ್ಗೆ ಶಿವಕುಮಾರ್ ಅವರು ತಮ್ಮ ಮಗಳ ಮರಣದ ನಂತರ ಅಧಿಕಾರಿಗಳಿಂದ ತಾವು ಎದುರಿಸಿದ ಕಿರುಕುಳ ಮತ್ತು ಲಂಚಕ್ಕೆ ಸಂಬಂಧಿಸಿದ ಅನುಭವವನ್ನು ಲಿಂಕ್ಡ್​​ಇನ್​ನಲ್ಲಿ ಪೋಸ್ಟ್ ಮಾಡಿದ್ದರು. ಈ ಪೋಸ್ಟ್​​ನಲ್ಲಿ ಬೆಳ್ಳಂದೂರು ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿತ್ತು.

ಈ ಆರೋಪದ ನಂತರ ಘಟನೆ ಬಗ್ಗೆ ವರದಿ ನೀಡುವಂತೆ ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಸೂಚನೆ ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿದ ವೈಟ್ ಫೀಲ್ಡ್ ಡಿಸಿಪಿ ಪರಶುರಾಮ್ ಕಮಿಷನರ್ ಅವರಿಗೆ ವರದಿ ಸಲ್ಲಿಸಿದರು.
ಪರಶುರಾಮ್ ಸಲ್ಲಿಸಿದ ವರದಿಯಲ್ಲಿ ಮೇಲ್ನೋಟಕ್ಕೆ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಸಾಬೀತಾದಾಗಿದೆ. ಈ ಹಿನ್ನೆಲೆ ಬೆಳ್ಳಂದೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ರಮೇಶ್ ರೊಟ್ಟಿ ಅವರನ್ನು ಅಮಾನತುಗೊಳಿಸಲು ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಖಡಕ್ ಆದೇಶ ನೀಡಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!