
ಹಾಸನ : ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಪ್ರೇಯಸಿ ಆತ್ಮಹತ್ಯೆ; ವಾರ ಕಳೆದ್ರೂ ಬಂಧನವಾಗದ ಆರೋಪಿ.! ಕೈಕಟ್ಟಿ ಕುಳಿತುಕೊಂಡ್ರ ಪೊಲೀಸ್ರು.! ಕಾರಣವೇನು.?
news.ashwasurya. in
ಅಶ್ವಸೂರ್ಯ/ಹಾಸನ : ಯುವತಿ ಪ್ರೀತಿಸಿದ ಯುವಕನಿಗಿಂತ ಎರಡು ವರ್ಷ ದೊಡ್ಡವಳು ಯುವಕ ಯುವತಿ ಮದುವೆಯಾಗಲು ತೀರ್ಮಾನಿಸಿದ್ದರು.! ಅಷ್ಟರಲ್ಲೇ ಪ್ರಿಯಕರಿನಿಗೆ ಆಕೆ ಬೇಡವಾಗಿದ್ದಾಳೆ..ಸುಖ ಸುಮ್ಮನೆ ಆಕೆಯನ್ನು ಅನುಮಾನದಿಂದ ನೋಡುತ್ತಾ.. ನಿಂದಿಸಲು ಶುರುಮಾಡಿದ್ದನಂತೆ.!

ನಿತ್ಯ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಪ್ರೇಯಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.! ಘಟನೆ ನಡೆದು ವಾರ ಕಳೆದರೂ ಆರೋಪಿಯನ್ನು ಇನ್ನೂ ಪೊಲೀಸರು ಬಂಧಿಸಿಲ್ಲ ಎಂದು ಆಕೆಯ ಹೆತ್ತವರು ಕಣ್ಣೀರು ಹಾಕುತ್ತಿದ್ದಾರೆ.ಈ ಘಟನೆ ಹಾಸನ ತಾಲ್ಲೂಕಿನ, ಜಾಗರವಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಜಯರಾಮ್ ನಾಯ್ಕ್ ಹಾಗೂ ಶೋಭಾ ದಂಪತಿಯ ಪುತ್ರಿ ಪ್ರೀಯಾಂಕಾ (21) ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಕೆಲಸ ಮಾಡುತ್ತಿದ್ದಳಂತೆ, ನಾಗಸಂದ್ರದ ಶಿವಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಪ್ರಿಯಾಂಕಾಗೆ ಆಲೂರು ತಾಲ್ಲೂಕಿನ ಸುಮಂತ್ ಪರಿಚಯವಾಗಿ ಕಳೆದ ಮೂರು ತಿಂಗಳಿನಿಂದ ಪರಸ್ಪರ ಪ್ರೀತಿಸುತ್ತಿದ್ದರು. ತಾನು ಪ್ರೀತಿಸುತ್ತಿದ್ದ ಯುವತಿ ವಯಸ್ಸಿನಲ್ಲಿ ತನಗಿಂತ ಎರಡು ವರ್ಷ ದೊಡ್ಡವಳಾಗಿದ್ದರೂ ಮದುವೆಯಾಗಲು ನಿಶ್ವಯಿಸಿದ್ದನಂತೆ.

ಆದ್ರೆ ಯುವಕ ತನ್ನ ಪ್ರೇಯಸಿ ಮೇಲೆ ಅನುಮಾನಗೊಂಡಿದ್ದಾನೆ ಈ ಹಿನ್ನೆಲೆಯಲ್ಲಿ ಆಕೆಗೆ ನಿತ್ಯ ಕಿರುಕುಳ ನೀಡುತ್ತಿದ್ದನಂತೆ. ನೀನು ನನಗೆ ಬೇಡ ಆತ್ಮಹತ್ಯೆ ಮಾಡಿಕೋ ಎಂದು ಪದೇ ಪದೇ ಮಾನಸಿಕ ಹಿಂಸೆ ನೀಡುತ್ತಿದ್ದನಂತೆ.!? ಇದರಿಂದ ಬೇಸತ್ತ ಪ್ರಿಯಾಂಕಾ ತಾನು ವಾಸವಿದ್ದ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು.! ಆತ್ಮಹತ್ಯೆ ಮಾಡಿಕೊಳ್ಳುವ ಕೊನೇ ಕ್ಷಣದಲ್ಲಿ ಸುಮಂತ್ ಒತ್ತಡ ಹಾಕಿರುವ ಬಗ್ಗೆ ತನ್ನ ಮೊಬೈಲ್ನಲ್ಲಿ ಆಡಿಯೋ ರೆಕಾರ್ಡ್ ಮಾಡಿದ್ದು ಮೊಬೈಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ
ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಸುಮಂತ್ ಕಿರುಕುಳ ಹಾಗೂ ಪ್ರಚೋದನೆಯೇ ಮುಖ್ಯ ಕಾರಣವಾಗಿದ್ದು ಆತನ ವಿರುದ್ಧ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣ ದಾಖಲಾಗಿದ್ದೂ ಆರೋಪಿಯನ್ನು ಪೊಲೀಸರು ಇದುವರೆಗೂ ಬಂಧಿಸಿಲ್ಲ. ಹೀಗಾಗಿ ಕೂಡಲೇ ಆರೋಪಿಯನ್ನು ಬಂಧಿಸದಿದ್ದರೆ ಠಾಣೆ ಎದುರೇ ಅನಿರ್ಧಿಷ್ಟಾವಧಿ ಧರಣಿ ನಡೆಸುವುದಾಗಿ ಪ್ರಿಯಾಂಕಾ ಪೋಷಕರು ಎಚ್ಚರಿಕೆ ನೀಡಿದ್ದಾರೆ…ಮುಂದೆನಾಗಬಹುದು ಎನ್ನುವುದನ್ನು ಕಾದು ನೋಡಬೇಕಿದೆ..


