ಶಿವಮೊಗ್ಗ : ಮೈಸೂರು
ಎಜುಕೇಷನ್ ಅಕಾಡೆಮಿ ಟ್ರಸ್ಟ್ ವತಿಯಿಂದ ಡಿ.13ರಂದು “ಪರೀಕ್ಷೆ ಒಂದು ಹಬ್ಬ-ಸಂಭ್ರಮಿಸಿ” ಕಾರ್ಯಾಗಾರ : ಹೆಚ್ ಎಸ್ ಸುಂದರೇಶ್.
news.ashwasurya.in
ಅಶ್ವಸೂರ್ಯ/ಶಿವಮೊಗ್ಗ : ಮೈಸೂರು ಎಜುಕೇಷನ್ ಅಕಾಡೆಮಿ ಟ್ರಸ್ಟ್ ವತಿಯಿಂದ ಎಸ್.ಎಸ್.ಎಲ್.ಸಿ. ಮಕ್ಕಳಿಗಾಗಿ ಡಿ.13ರಂದು ಬೆಳಿಗ್ಗೆ 9.30ರಿಂದ ಸಂಜೆ 5 ಗಂಟೆಯವರೆಗೆ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ “ಪರೀಕ್ಷೆ ಒಂದು ಹಬ್ಬ-ಸಂಭ್ರಮಿಸಿ” ಎಂಬ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಗಂಗೋತ್ರಿ ಎಜುಕೇಷನ್ ಅಕಾಡೆಮಿ ಟ್ರಸ್ಟಿನ ಅಧ್ಯಕ್ಷರು ಹಾಗೂ ಹಾಲಿ ಸೂಡಾ ಅಧ್ಯಕ್ಷರಾದ ಹೆಚ್.ಎಸ್. ಸುಂದರೇಶ್ ಅವರು ಹೇಳಿದರು.
ಅವರು ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಮೈಸೂರು ಎಜುಕೇಷನ್ ಅಕಾಡೆಮಿ ಟ್ರಸ್ಟ್ನಲ್ಲಿ ಈಗ ಹೊಸ ಆಡಳಿತ ಬಂದಿದ್ದು, – ಗಂಗೋತ್ರಿ ಸ್ವತಂತ್ರ ಪದವಿ
ಪೂರ್ವ ಕಾಲೇಜನ್ನು ವಹಿಸಿ ಕೊಂಡಿದ್ದೇವೆ. ಅದರ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತಿದ್ದು, ಶಿಕ್ಷಣಕ್ಕಾಗಿ ಸೇವೆ ಸಲ್ಲಿಸುವ ಹಿನ್ನಲೆಯಲ್ಲಿ ಈ ಕಾಲೇಜಿನ ನಿರ್ವಹಣೆಯನ್ನು ವಹಿಸಿಕೊಂಡಿದ್ದೇವೆ . ಬಡ ಮತ್ತು ಮಧ್ಯಮ ವರ್ಗದ ವಿಧ್ಯಾರ್ಥಿಗಳಿಗಾಗಿ ವಿಶೇಷ ಆಸಕ್ತಿ ವಹಿಸಲಿದ್ದು, ಎಲ್ಲರೂ ಶಿಕ್ಷಣ ಪಡೆಯಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.
ಇದೀಗ ಕಾಲೇಜಿನಲ್ಲಿ
ಉತ್ತಮ ಉಪನ್ಯಾಸಕರು ಪಾಠ ಮಾಡುತ್ತಿದ್ದಾರೆ. ಗ್ರಂಥಾಲಯ, ಹಾಸ್ಟೆಲ್, ಬಸ್ ಸೌಲಭ್ಯ, ಉತ್ತಮ ಪ್ರಯೋಗಾಲಯ, ಎಸಿ ಸ್ಮಾರ್ಟ್ ಕ್ಲಾಸ್ ಮುಂತಾದ ಆಧುನಿಕ ಸೌಲಭ್ಯಗಳನ್ನು ಗಂಗೋತ್ರಿ ಪಿಯು ಕಾಲೇಜ್ ಹೊಂದಿದ್ದು, ಕಳೆದ ಹಲವು ವರ್ಷಗಳಿಂದ ನೂರಕ್ಕೆ ನೂರರಷ್ಟು ಫಲಿತಾಂಶ ಬರುತಲಿದೆ. ನಮ್ಮ ಗಂಗೋತ್ರಿ ಕಾಲೇಜನ್ನು ಮತ್ತಷ್ಟು ಉನ್ನತ ಮಟ್ಟಕ್ಕೇರಿಸಿ ಶಿವಮೊಗ್ಗದಲ್ಲೆ ಮಾದರಿ ಪಿಯು ಕಾಲೇಜನ್ನಾಗಿ ಮಾಡಲು ಒಳ್ಳೆಯ ಶೈಕ್ಷಣಿಕ ವಾತಾವರಣವನ್ನು ನಿರ್ಮಿಸಲು ಎಲ್ಲಾ ಸೇರಿ ಪ್ರಯತ್ನಿಸುತ್ತಿದ್ದೇವೆ. ಪಿಯು ತರಗತಿಗಳ ಜೊತೆಗೆ ನೀಟ್, ಜೆಇಇ, ಸಿಇಟಿ, ಪರೀಕ್ಷೆಗೆ ತಯಾರಿಯನ್ನು ಕೂಡ ಮಾಡಲಾಗುವುದು. ವಿದ್ಯಾರ್ಥಿಗಳು ಇದಕ್ಕಾಗಿ ಬೇರೆಕಡೆ ಟ್ಯೂಷನ್ಗೆ ಹೋಗುವ ಅವಶ್ಯಕತೆ ಇಲ್ಲ ಎಂದರು.
ಮೈಸೂರು ಎಜುಕೇಷನ್ ಅಕಾಡೆಮಿ ಟ್ರಸ್ಟ್ ಎಸ್.ಎಸ್.ಎಲ್.ಸಿ. ಮಕ್ಕಳನ್ನು ಉದ್ದೇಶವಾಗಿಟ್ಟುಕೊಂಡು ಅವರು ಹೇಗೆ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಬೇಕು. ತಮಗಿರುವ ಗೊಂದಲಗಳನ್ನು ಹೇಗೆ ನಿವಾರಿಸಿಕೊಳ್ಳಬೇಕು. ಮುಂತಾದ ವಿಷಯಗಳಿಗೆ ಸಂಬಂಧಪಟ್ಟಂತೆ ಪರೀಕ್ಷೆ ಒಂದು ಹಬ್ಬ ಅದನ್ನು ಖುಷಿಯಿಂದ ಸಂಭ್ರಮಿಸಿ ಎಂಬ ಹಿನ್ನಲೆಯಲ್ಲಿ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಈ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಸಿಇಓ ಎನ್. ಹೇಮಂತ್, ಶಾಲಾ ಮತ್ತು ಸಾಕ್ಷಾರತಾ ಇಲಾಖೆಯ ಉಪನಿರ್ದೆಶಕ ಎಸ್.ಆರ್. ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ಅನುದಾನ ರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ಗಿರೀಶ್, ಮ್ಯಾಮ್ಕೋಸ್ ಎಂ.ಡಿ. ಶ್ರೀಕಾಂತ್ ಅವರು ಭಾಗವಹಿಸುವರು ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಮೈಸೂರಿನ ವ್ಯಕ್ತಿತ್ವ ವಿಕಸನ ಗುರು ಆರ್.ಎ. ಚೇತನ್ರಾಮ್ ಹಾಗೂ ಶಿಕ್ಷಣ ತಜ್ಞ ಸುರೇಶ್ ಕುಲಕರ್ಣಿ ಭಾಗವಹಿಸಲಿದ್ದು, ಪರೀಕ್ಷೆಗಳ ಸವಾಲು ಕುರಿತು, ಪರೀಕ್ಷೆಯಲ್ಲಿ ವಿಷಯ ನೆನಪಿಟ್ಟುಕೊಳ್ಳುವುದು ಹೇಗೆ ?

ಎಂಬುದರ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಶಾಲಾ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೆಶಕ ಜಿ.ವಿ. ಹರಿಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಾಂಶುಪಾಲ ರೇಣುಕಾ ಅರಾಧ್ಯ, ಆಡಳಿತಾಧಿಕಾರಿ ರೂಪಾ ಪುಣ್ಯಕೋಟಿ, ಸಂಸ್ಥೆಯ ಉಪಾಧ್ಯಕ್ಷರಾದ ಎನ್.ವಿ. ಮಂಜುನಾಥ್, ಬಿ.ಎನ್. ಕೃಷ್ಣಮೂರ್ತಿ, ಕಾರ್ಯದರ್ಶಿ ಜಗದೀಶ್, ಜಂಟಿ ಕಾರ್ಯದರ್ಶಿ ಡಾ.ಹೆಚ್.ಇ. ಇಫ್ರಾನ್ ಅಹ್ಮದ್, ಕೆ. ರಾಕೇಶ್ಗೌಡ, ನಿರ್ದೇಶಕ ಚಂದನ್, ಎಂ.ಪಿ. ದಿನೇಶ್ ಪಟೇಲ್, ಪಿ.ಎಸ್. ಗಿರೀಶ್ರಾವ್, ಡಿ. ಪರಮೇಶ್ವರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.


