ಉಡುಪಿ : ಜಿಲ್ಲೆಯಲ್ಲಿ ಅಕ್ರಮ ಮರಳು – ಗಣಿಗಾರಿಕೆ ತಡೆಗೆ ದಿಟ್ಟ ಕ್ತಮ.! 19 ಚೆಕ್ಪೋಸ್ಟ್ಗಳು.!
news.ashwasurya.in
ಅಶ್ವಸೂರ್ಯ/ಉಡುಪಿ: ಉಡುಪಿ ಜಿಲ್ಲಾ ಸರಹದ್ದಿನಲ್ಲಿ ನೆಡೆಯುತ್ತಿರುವ ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ ಗಣಿಗಾರಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಪೊಲೀಸ್ ಇಲಾಖೆ ದಿಟ್ಟ ಕ್ರಮ ಕೈಗೊಂಡಿದೆ.! ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 19 ಚೆಕ್ಪೋಸ್ಟ್ಗಳನ್ನು ತೆರೆದು,ಅಕ್ರಮ ಮರಳು ಸಾಗಾಣಿಕೆ ಮಾಡುವ ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟು ಕಾರ್ಯಾಚರಣೆಗೆ ಇಳಿಯಲಾಗಿದೆ.ರಾತ್ರಿ ಹಗಲೆನ್ನೇದೆ ಎರಡು ಪಾಳಿಯದಲ್ಲಿ ಸಿಬ್ಬಂದಿಯನ್ನು ನಿಯೋಜಿಸಿ, ಮರಳು, ಕೆಂಪುಕಲ್ಲು, ಶಿಲೆಕಲ್ಲು ಹಾಗೂ ಎಂ ಸ್ಯಾಂಡ್ ಸಾಗಾಟ ನಡೆಸುವ ಎಲ್ಲಾ ವಾಹನಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲಾಗುತ್ತಿದೆ.
ದಿನಾಂಕ 06-12-2025 ರಿಂದ ಇದುವರೆಗೆ 3966 ವಾಹನಗಳನ್ನು ತಪಾಸಣೆ ನಡೆಸಲಾಗಿದ್ದು, ಸರ್ಕಾರಕ್ಕೆ ರಾಯಲ್ಟಿ ಹಣ ಪಾವತಿಸದೇ ಹಾಗೂ ಯಾವುದೇ ಪರವಾನಿಗೆ ಇಲ್ಲದೆ ಸಾಗಾಟ ನಡೆಸುತ್ತಿದ್ದ 11 ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಮಣಿಪಾಲ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಒಂದು ವಾಹನವನ್ನು ಜಪ್ತಿ ಮಾಡಿ, ಅದರ ಚಾಲಕ ಹಾಗೂ ಮಾಲಿಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉಳಿದ 10 ವಾಹನಗಳನ್ನು ಮಹಜರು ಮೂಲಕ ಸ್ವಾಧೀನಪಡಿಸಿಕೊಂಡು, ಮುಂದಿನ ಕ್ರಮಕ್ಕಾಗಿ ಉಡುಪಿ ಗಣಿ ಇಲಾಖೆಗೆಯ ವರದಿಗೆ ಕಳುಹಿಸಲಾಗಿದೆ. ಗಣಿ ಇಲಾಖೆಯವರು ಈ ಸಂಬಂಧ ವಾಹನಗಳ ಆರ್ಸಿ ಮಾಲಿಕರಿಗೆ ಒಟ್ಟು ರೂ. 3,08,710 ದಂಡ ವಿಧಿಸಿದ್ದಾರೆ.

ಮುಂದೆಯೂ ಸರ್ಕಾರಕ್ಕೆ ರಾಯಧನ ಪಾವತಿಸದೇ ಹಾಗೂ ಪರವಾನಿಗೆ ಇಲ್ಲದೆ ನಡೆಯುವ ಮರಳು ಹಾಗೂ ಖನಿಜ ಸಾಗಾಟದ ವಿರುದ್ಧ ಕಠಿಣ ಕ್ರಮ ಮುಂದುವರಿಸಲಾಗುವುದು ಎಂದು ಪೊಲೀಸ್ ಇಲಾಖೆ ಅಕ್ರಮ ಮರಳು ಕಲ್ಲು ದಂಗೆಕೋರರಿಗೆ ಖಡಕ್ ಸಂದೇಶ ರವಾನಿಸಿದೆ.


