

ದಾವಣಗೆರೆ : ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಮಾಜಿ ಕಾರ್ಪೊರೇಟರ್.! ಸುಟ್ಟು ಕರಕಲಾಯ್ತು ದೇಹ.! ತಂದೆಯ ಸಾವಿನ ಸುದ್ದಿ ತಿಳಿದು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನ.!
news.ashwasurya.in
ಅಶ್ವಸೂರ್ಯ/ದಾವಣಗೆರೆ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬಿಜೆಪಿ ಮಾಜಿ ಕಾರ್ಪೋರೇಟರ್ ಶವ ಪತ್ತೆಯಾಗಿದ್ದು, ದಾವಣಗೆರೆ ಹೊರವಲಯದಲ್ಲಿ ಕಾರಿನಲ್ಲಿ ಕಾರ್ಪೋರೇಟ್ರ್ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ, ಮಾಹಿತಿ ತಿಳಿದ ಕೂಡಲೆ ಇಬ್ಬರು ಮಕ್ಕಳು ದುಡುಕಿನ ನಿರ್ಧಾರಕ್ಕೆ ಯತ್ನಿಸಿದ್ದಾರೆ.
ದಾವಣೆಗೆರೆ ನಗರದ 43ನೇ ವಾರ್ಡ್ನ ಮಾಜಿ ಕಾರ್ಪೋರೇಟರ್ ಸಂಕೋಳ್ ಚಂದ್ರಶೇಖರ ಶವ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಈ ವಿಷಯ ಸಂಕೋಳ್ ಚಂದ್ರಶೇಖರ ಅವರ ಇಬ್ಬರು ಮಕ್ಕಳಿಗೆ ತಿಳಿಯುತ್ತಿದ್ದಂತೆ ಅವರು ಕೂಡ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅಸ್ವಸ್ಥಗೊಂಡಿರುವ ಇಬ್ಬರು ಮಕ್ಕಳನ್ನು ಆಸ್ಪತ್ರೆ ದಾಖಲಿಸಲಾಗಿದೆ. ಸಾಲದ ವಿಚಾರದಲ್ಲಿ ಮನೆಯಲ್ಲಿ ನಡೆದ ಜಗಳವೇ ಈ ದುರಂತಕ್ಕೆ ಕಾರಣ ಎನ್ನಲಾಗಿದ್ದು ಮೂವರು ಆತ್ಮಹತ್ಯೆ ಮಾಡಿಕೊಳ್ಳವ ನಿರ್ಧಾರಮಾಡಿ ಬದುಕು ಅಂತ್ಯಗೊಳಿಸಿಕೊಳ್ಳಲು ಮುಂದಾಗಿದ್ದರು ಎನ್ನುವ
ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮಾಜಿ ಕಾರ್ಪೋರೇಟರ್ ದುರಂತ ಅಂತ್ಯಕ್ಕೆ ರಾಜ್ಯವೇ ಮರುಗಿದೆ.

ಸಾಲ ಮಾಡಿಕೊಂಡಿದ್ದ ಮಾಜಿ ಕಾರ್ಪೋರೇಟರ್ ತಂದಗೆ ಮಕ್ಕಳ ಕ್ಲಾಸ್
ಮಾಜಿ ಕಾರ್ಪೋರೇಟರ್ ಆಗಿರುವ ಸಂಕೋಳ್ ಚಂದ್ರಶೇಖರ್ ಸಾಲ ಮಾಡಿಕೊಂಡಿದ್ದರು. ಸಾಲ ಹೊರೆ ಹೆಚ್ಚಾಗುುತ್ತಿದ್ದ ಕಾರಣ ಮನೆಗೆ ಸಾಲಗಾರರು ಆಗಮಿಸಲು ಆರಂಭಿಸಿದ್ದರು. ಇದರಿಂದ ಸಂಕೋಳ್ ಚಂದ್ರಶೇಖರ ಅವರ ಇಬ್ಬರು ಮಕ್ಕಳಾದ 20 ವರ್ಷದ ನರೇಶ ಹಾಗೂ 23 ವರ್ಷದ ಪವಿತ್ರಾಗೆ ತೀವ್ರ ಕಿರಿಕಿರಿಯಾಗುತ್ತಿತ್ತು. ಎಲ್ಲೇ ಹೋದರೂ ಸಾಲದ ವಿಚಾರವಾಗಿ ಜನರು ಪ್ರಶ್ನೆ ಮಾಡುತ್ತಿದ್ದರು. ಹೀಗಾಗಿ ಆಕ್ರೋಶಗೊಂಡಿದ್ದ ಮಕ್ಕಳು ನಿನ್ನೆ (ಜ.10) ಸಂಕೋಳ್ ಚಂದ್ರಶೇಖರ ಮನೆಗೆ ಆಗಮಿಸುತ್ತಿದ್ದಂತೆ ಕ್ಲಾಸ್ ತೆಗೆದುಕೊಂಡಿದ್ದರು. ಇದು ಮುಂದವರದರೆ ನಾವು ಸಾಯಬೇಕಾಗುತ್ತದೆ ಎಂದು ಮಕ್ಕಳು ಎಚ್ಚರಿಕೆ ನೀಡಿದ್ದರು. ಈ ಮಾತು ಸಂಕೋಳ್ ಚಂದ್ರಶೇಖರ ಅವರ ತೀವ್ರ ಘಾಸಿಗೊಳಿಸಿತ್ತು ಎನ್ನಲಾಗಿದೆ.
ಕಾರಿನೊಳಗೆ ಕುಳಿತು ಪೆಟ್ರೋಲ್ ಮುರಿದುಕೊಂಡು ಬೆಂಕಿ ಹಚ್ಚಿಕೊಂಡ ನಾಯಕ
ಸಂಕೋಳ್ ಚಂದ್ರಶೇಖರ ತಮ್ಮ ಬದುಕನ್ನು ತಮ್ಮ ಕೈಯಾರೆ ಅಂತ್ಯಗೊಳಿಸಿಕೊಂಡಿದ್ದಾರೆ

ಎನಾಯ್ತು.!
ಮನೆಯಲ್ಲಿ ಮಕ್ಕಳ ಜೋತೆಗೆ ಜಗಳವಾಡಿಕೊಂಡ ನಂತರದಲ್ಲಿ ತಮ್ಮ ಕಾರಿನ ಮೂಲಕ ದಾವಣಗೆರೆ ಹೊರವಲಯ ನಾಗನೂರು ರಸ್ತೆಯ ಬಳಿ ಇರುವ ಅಡಿಕೆ ತೋಟಕ್ಕೆ ತೆರಳಿದ್ದಾರೆ. ಕಾರು ನಿಲ್ಲಿಸಿ ಇಡೀ ಕಾರಿಗೆ ಪೆಟ್ರೋಲ್ ಸುರಿದಿದ್ದಾರೆ. ಬಳಿಕ ಕಾರಿನ ಒಳಗೆ ಡೋರ್ ಲಾಕ್ ಮಾಡಿಕೊಂಡು ಬೆಂಕಿ ಹಚ್ಚಿದ್ದಾರೆ. ಒಂದೇ ಸಮನೆ ಬೆಕ್ಕಿ ಜ್ವಾಲೆಯಾಗಿ ಸಂಕೋಳ್ ಚಂದ್ರಶೇಖರ ಸುಟ್ಟು ಬೂದಿಯಾಗಿದ್ದಾರೆ. ಇತ್ತ ತಂದೆ ಮನೆಗೆ ಬರಲಿಲ್ಲ, ಫೋನ್ ಕೂಡ ರಿಸೀವ್ ಮಾಡಿಲ್ಲ. ಇಬ್ಬರು ಮಕ್ಕಳು ಆಘಾತಗೊಂಡಿದ್ದಾರೆ.ನಂತರ ಅಪ್ಪ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದ್ದಂತೆ
ಇಬ್ಬರು ಮಕ್ಕಳು ಕೂಡ ಮನೆಯಲ್ಲಿ ಬದುಕು ಅಂತ್ಯಗೊಳಿಲು ಯತ್ನಿಸಿದ್ದಾರೆ. ತೀವ್ರ ಅಸ್ವಸ್ಥಗೊಂಡಿರುವ ಇಬ್ಬರು ಮಕ್ಕಳನ್ನು ದಾವಣೆಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಆರೋಗ್ಯ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಅಪ್ಪನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮಕ್ಕಳು ವಿಷ ಸೇವಿಸಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದರು. ತೀವ್ರ ಅಸ್ವಸ್ಥಗೊಂಡಿದ್ದ ಇಬ್ಬರು ಮಕ್ಕಳು ದಾವಣೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ಅಸ್ವಸ್ಥಗೊಂಡ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನೆಡೆಸುತ್ತಿದ್ದರೆ ತಂದೆ ಚಂದ್ರಶೇಖರ್ ಸಂಕೋಳ್ ದೇಹ ಕಾರಿನಲ್ಲಿ ಸುಟ್ಟು ಬೂದಿಯಾಗಿದೆ ಅಂತ್ಯಕ್ರಿಯೆ ಮಾಡುವ ಮುನ್ನವೆ ದೇಹ ಸುಟ್ಟು ಬೂದಿಯಾಗಿದೆ.! ಅಲ್ಟೋ ಕಾರಿನ ಹಿಂಬದಿ ಸೀಟ್ನಲ್ಲಿ ಸಂಪೂರ್ಣ ಸುಟ್ಟು ಕರಕಲಾಗಿರುವ ಮೃತದೇಹ ಪತ್ತೆಯಾಗಿದ್ದು ಗುರುತೇ ಸಿಗದಷ್ಟು ಮೃತದೇಹ ಸುಟ್ಟು ಕರಕಲಾಗಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ದಾವಣಗೆರೆ ಉತ್ತರ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದ ಚಂದ್ರಶೇಖರ ಸಂಕೋಳ್, ಜನಪರ ಕಾರ್ಯಗಳ ಮೂಲಕ ಜನಮನ್ನಣೆ ಗಳಿಸಿದ್ದರು. ಚಂದ್ರಶೇಖರ ಸಂಕೋಳ್ ಸಾವನ್ನಪ್ಪಿದ ಸುದ್ದಿ ಕೇಳಿ ತಂಡೋಪತಂಡವಾಗಿ ಜನರು, ಬೆಂಬಲಿಗರು ಆಗಮಿಸುತ್ತಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ ಎಂದು ವರದಿಯಾಗಿದೆ…


