
ಉತ್ತರ ಪ್ರದೇಶದ : ಪ್ರೀತಿಯ ಗುಂಗಿನಲ್ಲಿದ್ದ ಅಂತರ್ ಧರ್ಮೀಯ ಯುವತಿ ಯುವಕನನ್ನು ಬರ್ಬರವಾಗಿ ಹತ್ಯೆಮಾಡಿದ ಯುವತಿಯ ಸಹೋದರರು.!
ಅಂತರ್ ಧರ್ಮದ ಪ್ರೇಮಿಗಳಿಬ್ಬರನ್ನು ಯುವತಿಯ ಸಹೋದರರೇ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ.
ಹತ್ಯೆಗೀಡಾದವರು 19 ವರ್ಷದ ಕಾಜಲ್ ಮತ್ತು ಆಕೆಯ ಪ್ರೇಮಿ 27 ವರ್ಷದ ಅರ್ಮಾನ್ ಎಂದು ಗುರುತಿಸಲಾಗಿದೆ. ಇಬ್ಬರೂ ಮೊರಾದಾಬಾದ್ನ ಉಮ್ರ ಸಬ್ಲಿಪುರ ಗ್ರಾಮದ ನಿವಾಸಿಗಳಾಗಿದ್ದು, ಕಾಜಲ್ ಕಾಲೇಜು ವಿದ್ಯಾರ್ಥಿನಿಯಾಗಿದ್ದಳು.
ಕಾಜಲ್ ಮತ್ತು ಅರ್ಮಾನ್ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಅರ್ಮಾನ್ ಪೋಷಕರು ಮಗ ಕಾಣೆಯಾಗಿದ್ದಾನೆ ಎಂದು ದೂರು ದಾಖಲಿಸಿದ್ದರು.ಕಾಜಲ್ ಕೂಡ ಕಾಣೆಯಾಗಿರುವುದು ತಿಳಿದ ಕೂಡಲೇ ಪೊಲೀಸರು ಕಾಜಲ್ ಸಹೋದರರನ್ನು ವಿಚಾರಣೆಗೆ ಒಳಪಡಿಸಿದಾಗ ಜೋಡಿ ಹತ್ಯೆ ಬಯಲಿಗೆ ಬಂದಿದೆ.! ಹಳ್ಳಿಯಿಂದ ಕೆಲವು ಮೀಟರ್ ದೂರದ ದೇವಾಲಯದ ಹಿಂದಿರುವ ಅರಣ್ಯಪ್ರದೇಶದಲ್ಲಿ ಹತ್ಯೆಮಾಡಿ ಜೋಡಿ ಶವ ಹುಳಲಾಗಿತ್ತು. ಆಕೆಯ ಸಹೋದರರೇ ಇಬ್ಬರನ್ನು ಹತ್ಯೆ ಮಾಡಿ ಹುತೂ ಹಾಕಿದ್ದರು ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಕಾಜಲ್ನ ಮೂವರು ಸಹೋದರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ….

news.ashwasurya.in
ಅಶ್ವಸೂರ್ಯ/ಲಕ್ನೋ : ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ಪ್ರೀತಿಯ ಗುಂಗಿನಲ್ಲಿದ್ದ ಅಂತರ್ ಧರ್ಮೀಯ ಯುವಕ ಮತ್ತು ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.ಈ ಹತ್ಯೆಗೆ ಸಂಭಂದಿಸಿದಂತೆ ಯುವತಿಯ ಸಹೋದರರನ್ನು ಬಂಧಿಸಲಾಗಿದೆ.
27 ವರ್ಷದ ಯುವಕ ಅರ್ಮಾನ್ ಮತ್ತು 22 ವರ್ಷದ ಯುವತಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಯುವತಿ ಕಾಜಲ್ರನ್ನು ಕೊಲೆಯಾದವರು ಎನ್ನಲಾಗಿದೆ. ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಅರ್ಮಾನ್ ಕೆಲವು ತಿಂಗಳುಗಳಿಂದ ಮೊರಾದಾಬಾದ್ನಲ್ಲಿ ವಾಸಿಸುತ್ತಿದ್ದ. ಈ ಸಮಯದಲ್ಲಿ ಆತನಿಗೆ ಕಾಜಲ್ ಪರಿಚಯವಾಗಿದೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಕಾಜಲ್ ಸಹೋದರರು ಅಂತರ್ಧರ್ಮೀಯ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಮೂರು ದಿನಗಳ ಹಿಂದೆ ಅರ್ಮಾನ್ ಮತ್ತು ಕಾಜಲ್ ಕಾಣೆಯಾಗಿದ್ದರು. ಅರ್ಮಾನ್ ತಂದೆ ಹನೀಫ್ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ನಡೆಸಿದಾಗ, ಕಾಜಲ್ ಕೂಡ ನಾಪತ್ತೆಯಾಗಿದ್ದಾಳೆ ಎಂದು ತಿಳಿದುಬಂದಿದೆ. ಆಕೆಯ ಸಹೋದರರನ್ನು ವಿಚಾರಣೆಗೆ ಒಳಪಡಿಸಿದಾಗ ಅವರಿಬ್ಬರನ್ನು ಕೊಂದಿರುವುದಾಗಿ ಯುವತಿಯ ಸಹೋದರರು ಒಪ್ಪಿಕೊಂಡಿದ್ದಾರೆ. ಆರೋಪಿಗಳು ಪೊಲೀಸರಿಗೆ ಶವಗಳನ್ನು ಹೂತಿಟ್ಟ ಸ್ಥಳವನ್ನು ತೋರಿಸಿದ್ದಾರೆ. ನಂತರ ಶವಗಳನ್ನು ಹೊರತೆಗೆಯಲಾಗಿದೆ. ಅರ್ಮಾನ್ ಮತ್ತು ಕಾಜಲ್ ಕೈಕಾಲುಗಳನ್ನು ಕಟ್ಟಿಹಾಕಿ ಕೊಚ್ಚಿ ಕೊಲ್ಲಲಾಗಿದೆ ಎಂದು ಆರೋಪಿಗಳು ಪೊಲೀಸರಿಗೆ ತಿಳಿಸಿದ್ದಾರೆ.

ಯುವತಿಯ ಸಹೋದರರೆ ಇಬ್ಬರನ್ನು ಕೊಂದಿದ್ದಾರೆ ಎಂದು ನಮಗೆ ತನಿಖೆಯಿಂದ ತಿಳಿದುಬಂದಿದೆ. ಶವಗಳನ್ನು ವಶಪಡಿಸಿಕೊಂಡಿದ್ದೇವೆ. ಕೊಲೆಗೆ ಬಳಸಿದ ಗುದ್ದಲಿಯನ್ನು ಸಹ ವಶಪಡಿಸಿಕೊಂಡಿದ್ದೇವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸತ್ಪಾಲ್ ಆಂಟಿಲ್ ಹೇಳಿದ್ದಾರೆ.
ಯುವತಿಯ ಮೂವರು ಸಹೋದರರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅವರಲ್ಲಿ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆಘಾತಕಾರಿ ಅಪರಾಧವು ಕೋಮು ಉದ್ವಿಗ್ನತೆಗೆ ಕಾರಣವಾಗದಂತೆ ನೋಡಿಕೊಳ್ಳಲು ಪೊಲೀಸರು, ಜೋಡಿ ವಾಸಿಸುತ್ತಿದ್ದ ಗ್ರಾಮದಲ್ಲಿ ಭಾರೀ ಬಿಗಿಭದ್ರತೆ ಕಲ್ಪಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎನ್ನಲಾಗಿದೆ.


