Headlines

ವಿಜಯನಗರ : ತಂದೆ-ತಾಯಿ, ತಂಗಿಯನ್ನು ಕೊಂದು ಮನೆಯ ಹಾಲ್‌ನಲ್ಲಿ ಹೂತು ಹಾಕಿದ್ದ ಮಗ.!!

ಕೊಲೆಯಾದ ಭೀಮರಾಜ್‌-ಜಯಲಕ್ಷ್ಮೀ ದಂಪತಿ ಮತ್ತು ಮಗಳು ಅಮೃತಾ ಹಾಗೂ ಆರೋಪಿ ಅಕ್ಷಯ್‌
ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನೆಲೆಸಿದ್ದರು. ತಂದೆ-ತಾಯಿ ಮತ್ತು ತಂಗಿಯನ್ನು ಕೊಲೆ ಮಾಡಿದ ಬಳಿಕ ಶವಗಳನ್ನು ಮನೆಯಲ್ಲೇ ಹೂತಿಟ್ಟಿರುವುದಾಗಿ ಆರೋಪಿ ಯುವಕ ಅಕ್ಷಯ್‌ ಕುಮಾರ್‌ ಬಾಯಿಬಿಟ್ಟಿದ್ದು ಇದೀಗ ಒಂದೇ ಗುಂಡಿಯಲ್ಲಿ ಮೂವರ ಮೃತ ದೇಹಗಳು ಪತ್ತೆಯಾಗಿವೆ.
ಮೂವರನ್ನು ಕೊಲೆ ಮಾಡಿದ್ದ ಯುವಕ, ಬಳಿಕ ಬೆಂಗಳೂರಿನ ತಿಲಕ್‌ನಗರ ಠಾಣೆಯಲ್ಲಿ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದ. ಪೊಲೀಸರ ಮುಂದೆ ತನ್ನ ತಂದೆ, ತಾಯಿ ಮತ್ತು ಸಹೋದರಿ ಜಯದೇವ ಆಸ್ಪತ್ರೆಗೆ ಹೋದವರು ಮನೆಗೆ ವಾಪಸ್​ ಆಗಿಲ್ಲ ಎಂದಿದ್ದ. ಈ ಸಂಬಂಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿಯ ಹೇಳಿಕೆಯಿಂದ ಅನುಮಾನಗೊಂಡ ಪೊಲೀಸರು,ಆತನನ್ನು ತಮ್ಮದೆ ಶೈಲಿಯಲ್ಲಿ ವಿಚಾರಣೆಗೆ ಒಳಪಡಿಸಿದಾಗ ಕೊಲೆಯ ಸತ್ಯ ಬಯಲಾಗಿದೆ.

ಮೊದಲಿಗೆ ತಾಯಿ ಜಯಲಕ್ಷ್ಮೀಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪಾಪಿ ಮಗ ಅಕ್ಷಯ್ ನಂತರ ಮನೆಯ ಕೊಠಡಿಯಲ್ಲಿ ಶವ ಹಾಕಿದ್ದ. ಬಳಿಕ ತಂಗಿ ಅಮೃತಾಗೆ ಕರೆ ಮಾಡಿ, ನಿನಗೆ ಗಿಫ್ಟ್ ತಂದಿದ್ದೇನೆ, ಬಾ ಅಂತ ಕರೆದಿದ್ದಾನೆ. ಆಗ ಮನೆಗೆ ಬಂದ ತಂಗಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ನಂತರ ತಂಗಿ, ತಾಯಿಯ ಮೃತದೇಹ ಕೊಠಡಿಯಲ್ಲಿ ಇರಿಸಿದ್ದ.
ಇನ್ನು ಮನೆಯಲ್ಲಿ ಟಿವಿ ನೋಡುತ್ತಾ ಕುಳಿತಿದ್ದ ತಂದೆ ಭೀಮರಾಜ್‌ ಅವರನ್ನೂ ಕೊಲೆಗೈದ ಬಳಿಕ, ಮನೆಯ ಹಾಲ್‌ನಲ್ಲೇ ಒಂದೇ ಗುಂಡಿಯಲ್ಲಿ ಮೂರು ಮೃತದೇಹಗಳನ್ನು ಹೂತು ಹಾಕಿದ್ದ ಎಂಬುವುದು ತನಿಖೆ ವೇಳೆ ತಿಳಿದುಬಂದಿದೆ.
ವಿಜಯನಗರ ಜಿಲ್ಲೆಯ ಕೊಟ್ಟೂರಿನ ಎಲ್ ಬಿ ಬಡಾವಣೆಯಲ್ಲಿನ ಬಾಡಿಗೆ ಮನೆಯಲ್ಲಿ ಜನವರಿ 27ರಂದು ಈ ಕೃತ್ಯವನ್ನು ಆರೋಪಿ ಅಕ್ಷಯ್ ಎಸಗಿದ್ದ. ಬಳಿಕ ಬೆಂಗಳೂರಿಗೆ ಹೋಗಿ ತಾನೇ ಹೆತ್ತವರು ಕಾಣೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದ. ಇದೀಗ ಆರೋಪಿ ಕೃತ್ಯ ಬಯಲಾದ ಹಿನ್ನೆಲೆಯಲ್ಲಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಕೊಟ್ಟೂರು ಎಸ್ಪಿ ಎಸ್.ಜಾಹ್ನವಿ
ತ್ರಿವಳಿ ಕೊಲೆಯ ಹಿಂದಿರುವ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪ್ರಸ್ತುತ, ತ್ರಿವಳಿ ಕೊಲೆ ಕೇಸ್​ ತನಿಖೆ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!