ಚಿತ್ರದುರ್ಗ : ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿಸಿದ ಐವರು ಖದೀಮರು ಅಂದರ್.!
Five officials were arrested for misusing the signatures of Chitradurga DC and ADC to create a fake bill worth Rs. 15 lakhs!

ಚಿತ್ರದುರ್ಗದ ಜಿಲ್ಲಾಧಿಕಾರಿ (DC) ಮತ್ತು ಅಪರ ಜಿಲ್ಲಾಧಿಕಾರಿ (ADC) ಅವರ ಡಿಜಿಟಲ್ ಸಹಿಯನ್ನು ದುರುಪಯೋಗಪಡಿಸಿಕೊಂಡು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ ಪ್ರಕರಣದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಐವರು ಸಿಬ್ಬಂದಿಯನ್ನು ಬಂಧಿಸಲಾಗಿದೆ.
ಬಂಧಿತರು ಜಿಲ್ಲಾ ನಗರಾಭಿವೃದ್ಧಿ ಕೋಶದ CLTC ವಿಭಾಗದ ಹೊರಗುತ್ತಿಗೆ ಸಿಬ್ಬಂದಿಗಳಾದ ಸೈಯ್ಯದ್ ಸಾಧಿಕ್, ವೆಂಕಟೇಶ್, ಇಂಜಿನಿಯರ್ ವಿನಯ್ ಶರ್ಮ, ಬಸವರಾಜ್ ಮತ್ತು ವಿಜಯ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮಾರ್ಚ್ 12ರಂದು ಬೆಳಗಿನ ಜಾವ ಕಚೇರಿಗೆ ಪ್ರವೇಶಿಸಿ, ಅಪರ ಜಿಲ್ಲಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ಡಿಜಿಟಲ್ ಸಹಿಯನ್ನು ನಕಲಿ ಮಾಡಿ ಸೃಷ್ಟಿಸಿದ್ದರು. ಬಳಿಕ ಆನ್ಲೈನ್ ವ್ಯವಸ್ಥೆಯಲ್ಲಿ ಜಿಲ್ಲಾಧಿಕಾರಿಗಳು ಅನುಮೋದನೆ ನೀಡಿದಂತೆ ತೋರಿಸಿ ‘VMH ಎಂಟರ್ಪ್ರೈಸಸ್’ ಹೆಸರಿಗೆ ಸುಮಾರು 15 ಲಕ್ಷ ರೂ. ಹಣ ಬಿಡುಗಡೆ ಮಾಡಲು ಆದೇಶ ಪತ್ರ ಸಿದ್ಧಪಡಿಸಿದ್ದರು….
news.ashwasurya.in
ಅಶ್ವಸೂರ್ಯ/ಚಿತ್ರದುರ್ಗ: ಮಹಾನ್ ಖದೀಮರ ಗ್ಯಾಂಗೊಂದು ಜಿಲ್ಲಾಧಿಕಾರಿ ಹಾಗೂ ಎಡಿಸಿಯವರ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು ಅಂದಾಜು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರನ್ನು ಬಂಧಿಸಿರುವ ಘಟನೆ ಪವಿತ್ರ ಚಿತ್ರದುರ್ಗದ ನೆಲದಲ್ಲಿ ವರದಿಯಾಗಿದೆ.
ನಗರಾಭಿವೃದ್ಧಿ CLTC ವಿಭಾಗದಲ್ಲಿ ಹೊರಗುತ್ತಿಗೆ ನೌಕರ ಸೈಯದ್ ಸಾದಿಕ್, ವಿನಯ್ ಶರ್ಮಾ, ವಿಜಯ್ ಕುಮಾರ್, ಬಸವರಾಜ, ಮಹೆಬೂಬ್ ಭಾಷಾ ಹಾಗೂ ವೆಂಕಟೇಶ್ ಎನ್ನುವ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಎ1 ಆರೋಪಿ ಸೈಯದ್ ಪರಾರಿಯಾಗಿದ್ದು, ಇನ್ನುಳಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲಾ ನಗರಾಭಿವೃದ್ಧಿ ವಿಭಾಗದ ಐವರು ಸಿಎಲ್ಟಿಸಿ ಸಿಬ್ಬಂದಿ 15 ಲಕ್ಷ ರೂ. ವೇತನದ ನಕಲಿ ಬಿಲ್ ಸೃಷ್ಟಿಸಿ, ಜಿಲ್ಲಾ ಖಜಾನೆಗೆ ಕಡತವನ್ನು ಕಳಿಸಿದ್ದರು. ಈ ವೇಳೆ ಸಹಿ ಬಗ್ಗೆ ಅನುಮಾನಗೊಂಡು ಖಜಾನೆ ಇಲಾಖೆಯಿಂದ ಆಕ್ಷೇಪಣೆ ಬಂದಿತ್ತು. ಈ ಹಿನ್ನಲೆಯಲ್ಲಿ ವಂಚನೆ ಬಯಲಾಗಿದ್ದು, ನಗರಾಭಿವೃದ್ಧಿ ಕೋಶದ ನಿರ್ದೇಶಕಿ ರೇಷ್ಮಾ ಹಾನಗಲ್ ಚಿತ್ರದುರ್ಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಇನ್ನೂ ಡಿಸಿ ಕಚೇರಿಯಲ್ಲಿ ಡಿಸಿ ಹಾಗೂ ಎಡಿಸಿ ಅವರಿಗೆ ಸಂಬಂಧಿತ ಡಿಎಸ್ಸಿ ಕೀ ಕಳ್ಳತನ ಮಾಡಿದ್ದಾರೆ ಎಂದು ನೌಕರ ಸೈಯದ್ ಸಾದಿಕ್ ವಿರುದ್ಧ ಕಳ್ಳತನ ಆರೋಪ ಕೇಳಿಬಂದಿದೆ. ಸದ್ಯ ಗುತ್ತಿಗೆ ನೌಕರರನ್ನು ಕೆಲಸದಿಂದ ವಜಾಗೊಳಿಸಿದ್ದು, ಓರ್ವ ಸರ್ಕಾರಿ ನೌಕರನನ್ನು ಅಮಾನತುಗೊಳಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.


