

ಕಲಬುರಗಿ: ನಡುರಸ್ತೆಯಲ್ಲಿ ಪತ್ನಿಯ ಕೊಲೆಮಾಡಿ ಹೆಣದ ಮೇಲೆ ಕಾರು ಹತ್ತಿಸಿದ ಪತಿಯ ಬಂಧನ.!
news.ashwasurya.in
ಅಶ್ವಸೂರ್ಯ/ಕಲಬುರಗಿ : ಕಲಬುರಗಿಯ ಅಫಜಲಪುರ ತಾಲೂಕಿನ ಬಳಿ ಪತಿಯೊಬ್ಬ ತನ್ನ ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಂತರ ಆಕೆಯ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾನೆ.! ಈ ಘಟನೆಗೆ ಸ್ಥಳದಲ್ಲಿದ್ದ ಸಾರ್ವಜನಿಕರನ್ನು ದಂಗುಬಡಿಸಿದೆ. ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.
ಕಲಬುರಗಿಯಲ್ಲಿ ಇಂದು ಹಾಡುಹಗಲೇ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು. ಅಫಜಲಪುರ ತಾಲೂಕಿನ ಬಳುರಗಿ ಬಳಿ ರಕ್ಕಸ ಪತಿಯೊಬ್ಬ ತನ್ನ ಪತ್ನಿಯನ್ನೇ ಅತ್ಯಂತ ಕ್ರೂರವಾಗಿ ದಾರಿ ಮಧ್ಯೆ ಕೊಲೆ ಮಾಡಿದ್ದಾನೆ.ಕುರಿಗಳ ಕತ್ತು ಕತ್ತರಿಸುವಂತೆ ಪತ್ನಿಯ ಕತ್ತು ಕತ್ತರಿಸಿ ನಂತರ ಆಕೆಯ ಮೇಲೆ ಇನೋವಾ ಕಾರನ್ನು ಹತ್ತಿಸಿ ವಿಕೃತಿ ಮೆರೆದಿದ್ದಾನೆ. ಸ್ಥಳದಲ್ಲಿ ಇದ್ದವರೇಲ್ಲ ಮೂಕಪ್ರೇಕ್ಷಕರಾಗಿ ನೋಡಿದರೆ ಹೊರತು ಎನು ಮಾಡದ ಸ್ಥಿತಿಯಲ್ಲಿ ಇದ್ದರು, ಆ ರಾಕ್ಷಸ ಮಾತ್ರ ತನ್ನ ಅಟ್ಟಹಾಸ ಮೆರೆದಿದ್ದಾನೆ. ನೋಡುಗರು ಮೊಬೈಲ್ ನಲ್ಲಿ ಈ ಕೃತ್ಯ ಚಿತ್ರಿಕರಿಸಿಕೊಂಡಿದ್ದಾರೆಯೇ ಹೊರತು ಯಾರೊಬ್ಬರೂ ಮಹಿಳೆಯ ರಕ್ಷಣೆಗೆ ಹೋಗಿಲ್ಲ.

ಪತ್ನಿಯ ತಲೆಗೂದಲು ಹಿಡಿದು ಕುಡುಗೋಲಿನಿಂದ ಆಕೆಯ ಕತ್ತನ್ನು ಕತ್ತರಿಸುತ್ತಿದ್ದಾನೆ. ನೆಲಕ್ಕೆ ಬಿದ್ದು ಆತನಿಂದ ಬಿಡಿಸಿಕೊಳ್ಳಲು ಯತ್ನಿಸುತ್ತಿರುವ ಮಹಿಳೆ, ಹತ್ತಾರು ಜನರ ಎದುರುಗಡೆಯೇ ಪ್ರಾಣ ಬಿಟ್ಟಿದ್ದಾಳೆ. ಈ ಭೀಭತ್ಸ ಘಟನೆ ನಡೆದಿದ್ದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಳುರಗಿ ಗ್ರಾಮದ ಬಳಿ ಮಾರ್ಚ್ 26ರ ಮಧ್ಯಾಹ್ನ ಸುಮಾರು 11:30 ರ ಸುಮಾರಿಗೆ ನಡೆದಿದೆ. ಇಷ್ಟಕ್ಕೂ ಸುಮ್ಮನಾಗದ ಈ ಕಿರಾತಕ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತ್ನಿಯ ಮೇಲೆ ತನ್ನ ಕಾರ್ ಹತ್ತಿಸಿ ವಿಕೃತಿ ಮೆರೆದಿದ್ದಾನೆ.
ಕಾರಲ್ಲಿ ಸಂಬಂಧಿಕರಿದ್ದರೂ ಸುಮ್ಮನೆ ಕುಳಿತಿದ್ದರು!
ನೆರೆಯ ಮಹಾರಾಷ್ಟ್ರದ ಬಾರಾಮತಿ ಮೂಲದ ಶೈಲಾ (28 ವರ್ಷ) ಎನ್ನುವ ಮಹಿಳೆಯೇ ಕೊಲೆಯಾದ ದುರ್ದೈವಿ. ಈತನ ಪತಿ ಅಕ್ಷಯ್ ಜಾಧವ್ ಎಂಬಾತನೇ ತನ್ನ ಪತ್ನಿಯನ್ನು ಕೊಲೆಮಾಡಿದ ಕಿರಾತಕ. ಮಹಾರಾಷ್ಟ್ರದ ಬಾರಾಮತಿಯಿಂದ ಇವರು ಕಲಬುರಗಿಯ ಗಾಣಗಾಪೂರಕ್ಕೆ ಬಂದಿದ್ದರು. ದತ್ತನ ದರ್ಶನಕ್ಕೆ ಹೋಗೋಣ ಅಂತ ಕರೆತಂದಿದ್ದನಂತೆ, ಈ ವೇಳೆ ಅಫಜಲಪುರ ಹೊರವಲಯದ ಬಳುರಗಿ ಬಳಿ ಏಕಾಏಕಿ ಕಾರು ನಿಲ್ಲಿಸಿದ ಪತಿ ಅಕ್ಷಯ ಜಾಧವ್, ಪತ್ನಿಯ ಕೂದಲನ್ನು ಹಿಡಿದು ನೆಲಕ್ಕೆ ಬೀಳಿಸಿದ್ದಾನೆ. ಬಳಿಕ ತನ್ನ ಬಳಿಯಿದ್ದ ಕುಡುಗೋಲಿನಿಂದ ಆಕೆಯ ಕತ್ತನ್ನು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಆ ವಾಹನದಲ್ಲಿ ಆತನ ತಂದೆ ತಾಯಿ ಸಂಬಂಧಿಕರು ಸೇರಿ ಐವರು ಇದ್ದರೆನ್ನಲಾಗಿದೆ. ಅವರು ಮೌನವಾಗಿ ಕೂರುವ ಮೂಲಕ ಸೊಸೆಯ ಕೊಲೆಗೆ ಪರೋಕ್ಷವಾಗಿ ಸಹಕರಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ಕಾರ್ಯಾಚರಣೆ ನಡೆಸಿ ಕೊಲೆ ಆರೋಪಿ ಅಕ್ಷಯ ಜಾಧವನನ್ನು ಅಫಜಲಪುರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಸದ್ಯ ಕೊಲೆಗೆ ನಿಖರವಾದ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪತ್ನಿಯನ್ನೇ ಕೊಂದು ವಿಕೃತಿ ಮೆರೆದ ಪತಿ ಈಗ ಪೊಲೀಸ್ ಅತಿಥಿಯಾಗಿದ್ದಾನೆ. ಕೊಲೆಗೆ ಕಾರಣವೇನೆನ್ನುವುದು ಪೊಲೀಸರ ತನಿಖೆಯಿಂದ ಬಯಲಾಗಬೇಕಿದೆ…


ರ್ಯ/ಕಲಬುರಗಿ : ಕಲಬುರಗಿಯ ಅಫಜಲಪುರ ತಾಲೂಕಿನ ಬಳಿ ಪತಿಯೊಬ್ಬ ತನ್ನ ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಂತರ ಆಕೆಯ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾನೆ.! ಈ ಘಟನೆಗೆ ಸ್ಥಳದಲ್ಲಿದ್ದ ಸಾರ್ವಜನಿಕರನ್ನು ದಂಗುಬಡಿಸಿದೆ. ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.
ಕಲಬುರಗಿಯಲ್ಲಿ ಇಂದು ಹಾಡುಹಗಲೇ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು. ಅಫಜಲಪುರ ತಾಲೂಕಿನ ಬಳುರಗಿ ಬಳಿ ರಕ್ಕಸ ಪತಿಯೊಬ್ಬ ತನ್ನ ಪತ್ನಿಯನ್ನೇ ಅತ್ಯಂತ ಕ್ರೂರವಾಗಿ ದಾರಿ ಮಧ್ಯೆ ಕೊಲೆ ಮಾಡಿದ್ದಾನೆ.ಕುರಿಗಳ ಕತ್ತು ಕತ್ತರಿಸುವಂತೆ ಪತ್ನಿಯ ಕತ್ತು ಕತ್ತರಿಸಿ ನಂತರ ಆಕೆಯ ಮೇಲೆ ಇನೋವಾ ಕಾರನ್ನು ಹತ್ತಿಸಿ ವಿಕೃತಿ ಮೆರೆದಿದ್ದಾನೆ. ಸ್ಥಳದಲ್ಲಿ ಇದ್ದವರೇಲ್ಲ ಮೂಕಪ್ರೇಕ್ಷಕರಾಗಿ ನೋಡಿದರೆ ಹೊರತು ಎನು ಮಾಡದ ಸ್ಥಿತಿಯಲ್ಲಿ ಇದ್ದರು, ಆ ರಾಕ್ಷಸ ಮಾತ್ರ ತನ್ನ ಅಟ್ಟಹಾಸ ಮೆರೆದಿದ್ದಾನೆ. ನೋಡುಗರು ಮೊಬೈಲ್ ನಲ್ಲಿ ಈ ಕೃತ್ಯ ಚಿತ್ರಿಕರಿಸಿಕೊಂಡಿದ್ದಾರೆಯೇ ಹೊರತು ಯಾರೊಬ್ಬರೂ ಮಹಿಳೆಯ ರಕ್ಷಣೆಗೆ ಹೋಗಿಲ್ಲ.
ಪತ್ನಿಯ ತಲೆಗೂದಲು ಹಿಡಿದು ಕುಡುಗೋಲಿನಿಂದ ಆಕೆಯ ಕತ್ತನ್ನು ಕತ್ತರಿಸುತ್ತಿದ್ದಾನೆ. ನೆಲಕ್ಕೆ ಬಿದ್ದು ಆತನಿಂದ ಬಿಡಿಸಿಕೊಳ್ಳಲು ಯತ್ನಿಸುತ್ತಿರುವ ಮಹಿಳೆ, ಹತ್ತಾರು ಜನರ ಎದುರುಗಡೆಯೇ ಪ್ರಾಣ ಬಿಟ್ಟಿದ್ದಾಳೆ. ಈ ಭೀಭತ್ಸ ಘಟನೆ ನಡೆದಿದ್ದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಳುರಗಿ ಗ್ರಾಮದ ಬಳಿ ಮಾರ್ಚ್ 26ರ ಮಧ್ಯಾಹ್ನ ಸುಮಾರು 11:30 ರ ಸುಮಾರಿಗೆ ನಡೆದಿದೆ. ಇಷ್ಟಕ್ಕೂ ಸುಮ್ಮನಾಗದ ಈ ಕಿರಾತಕ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತ್ನಿಯ ಮೇಲೆ ತನ್ನ ಕಾರ್ ಹತ್ತಿಸಿ ವಿಕೃತಿ ಮೆರೆದಿದ್ದಾನೆ.
ಕಾರಲ್ಲಿ ಸಂಬಂಧಿಕರಿದ್ದರೂ ಸುಮ್ಮನೆ ಕುಳಿತಿದ್ದರು!
ನೆರೆಯ ಮಹಾರಾಷ್ಟ್ರದ ಬಾರಾಮತಿ ಮೂಲದ ಶೈಲಾ (28 ವರ್ಷ) ಎನ್ನುವ ಮಹಿಳೆಯೇ ಕೊಲೆಯಾದ ದುರ್ದೈವಿ. ಈತನ ಪತಿ ಅಕ್ಷಯ್ ಜಾಧವ್ ಎಂಬಾತನೇ ತನ್ನ ಪತ್ನಿಯನ್ನು ಕೊಲೆಮಾಡಿದ ಕಿರಾತಕ. ಮಹಾರಾಷ್ಟ್ರದ ಬಾರಾಮತಿಯಿಂದ ಇವರು ಕಲಬುರಗಿಯ ಗಾಣಗಾಪೂರಕ್ಕೆ ಬಂದಿದ್ದರು. ದತ್ತನ ದರ್ಶನಕ್ಕೆ ಹೋಗೋಣ ಅಂತ ಕರೆತಂದಿದ್ದನಂತೆ, ಈ ವೇಳೆ ಅಫಜಲಪುರ ಹೊರವಲಯದ ಬಳುರಗಿ ಬಳಿ ಏಕಾಏಕಿ ಕಾರು ನಿಲ್ಲಿಸಿದ ಪತಿ ಅಕ್ಷಯ ಜಾಧವ್, ಪತ್ನಿಯ ಕೂದಲನ್ನು ಹಿಡಿದು ನೆಲಕ್ಕೆ ಬೀಳಿಸಿದ್ದಾನೆ. ಬಳಿಕ ತನ್ನ ಬಳಿಯಿದ್ದ ಕುಡುಗೋಲಿನಿಂದ ಆಕೆಯ ಕತ್ತನ್ನು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಆ ವಾಹನದಲ್ಲಿ ಆತನ ತಂದೆ ತಾಯಿ ಸಂಬಂಧಿಕರು ಸೇರಿ ಐವರು ಇದ್ದರೆನ್ನಲಾಗಿದೆ. ಅವರು ಮೌನವಾಗಿ ಕೂರುವ ಮೂಲಕ ಸೊಸೆಯ ಕೊಲೆಗೆ ಪರೋಕ್ಷವಾಗಿ ಸಹಕರಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ಕಾರ್ಯಾಚರಣೆ ನಡೆಸಿ ಕೊಲೆ ಆರೋಪಿ ಅಕ್ಷಯ ಜಾಧವನನ್ನು ಅಫಜಲಪುರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಸದ್ಯ ಕೊಲೆಗೆ ನಿಖರವಾದ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪತ್ನಿಯನ್ನೇ ಕೊಂದು ವಿಕೃತಿ ಮೆರೆದ ಪತಿ ಈಗ ಪೊಲೀಸ್ ಅತಿಥಿಯಾಗಿದ್ದಾನೆ. ಕೊಲೆಗೆ ಕಾರಣವೇನೆನ್ನುವುದು ಪೊಲೀಸರ ತನಿಖೆಯಿಂದ ಬಯಲಾಗಬೇಕಿದೆ…
