
ತೀರ್ಥಹಳ್ಳಿ: ಲಕ್ಕುಂದ ಗ್ರಾಮದ ಒಂಟಿ ಮಹಿಳೆ ಮನೆ ರಾಬರಿ ಪ್ರಕರಣವನ್ನು ಭೇಧಿಸಿದ ಆಗುಂಬೆ ಪೊಲೀಸರ ತಂಡ.
ತಕ್ಷಣವೇ ಕಾರ್ಯಚರಣೆಗೆ ಇಳಿದ ಪೊಲೀಸರ ತಂಡ ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್ ಅವರ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ರಾಜಶೇಖರ್ ನೇತ್ರುತ್ವದಲ್ಲಿ ಆಗುಂಬೆ ಠಾಣೆಯ ಖಡಕ್ ಪಿಎಸ್ಐ ಶಿವನಗೌಡ ಮಾಳೂರು ಪಿಎಸ್ಐ ಸುನೀಲ್ ಮತ್ತು ಪೊಲೀಸರ ತಂಡ ದರೋಡೆ ಕೋರರ ಬೆನ್ನಿಗೆ ಬಿದ್ದಿದ್ದರು….
news.ashwasurya.in
ಅಶ್ವಸೂರ್ಯ/ಆಗುಂಬೆ : ಏಪ್ರಿಲ್ 21 ರಂದು ಆಗುಂಬೆ ಸಮೀಪದ ಲಕ್ಕುಂದ ಗ್ರಾಮದ ಒಂಟಿ ಮಹಿಳೆ ವಾಸವಿದ್ದ ಮನೆಯೊಂದರಲ್ಲಿ ಹಾಡಹಗಲೇ ದರೋಡೆ ನೆಡೆದಿತ್ತು.! ಮನೆಯಲ್ಲಿ ಒಬ್ಬರೇ ಇದ್ದ 74 ವರ್ಷದ ವೃದ್ಧೆಯನ್ನು ಕಟ್ಟಿಹಾಕಿದ ದರೋಡೆಕೊರರು ಅವರ ಮೈಮೇಲಿದ್ದ ಹಾಗೂ ಬೀರುವಿನಲ್ಲಿದ್ದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಕೋರರು ದೋಚಿದ್ದರು.!
ಘಟನೆಯ ಹಿನ್ನೆಲೆ :
ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಲಕ್ಕುಂದ ಗ್ರಾಮದ ವಿಶಾಲಾಕ್ಷಿ (74) ಎಂಬುವವರ ಮನೆಯಲ್ಲಿ ಒಬ್ಬರೆ ವಾಸವಾಗಿದ್ದರು. ವಿಶಾಲಾಕ್ಷಿ ಅವರ ಪತಿ 15 ವರ್ಷದ ಹಿಂದೆ ನಿಧನರಾಗಿದ್ದಾರಿಂದ ಮನೆಯಲ್ಲಿ ಒಬ್ಬರೇ ವಾಸವಿದ್ದರು. ಏಪ್ರಿಲ್ 21ರ ಮಧ್ಯಾಹ್ನ ಸುಮಾರು 3 ಗಂಟೆಯ ಸುಮಾರಿಗೆ ವಿಶಾಲಾಕ್ಷಿ ಅವರು ಮನೆಯಲ್ಲಿ ಮಲಗಿದ್ದಾಗ ಯಾರೋ ಬಾಗಿಲು ತಟ್ಟಿದ ಶಬ್ದ ಕೇಳಿಸಿದೆ. ಕಿಟಕಿಯ ಮೂಲಕ ನೋಡಿದಾಗ ಮೂವರು ಅಪರಿಚಿತರು ನಿಂತಿದ್ದರು.
ಮೂವರು ಅಪರಿಚಿತರು ಕುಡಿಯಲು ನೀರು ಕೊಡಿ ಎಂದು ವಿಶಾಲಾಕ್ಷಿ ಅವರನ್ನು ಕೇಳಿದ್ದಾರೆ. ಬಾಗಿಲು ತೆರೆಯದ ವಿಶಾಲಾಕ್ಷಿ ಅವರು ಕಿಟಕಿಯ ಮೂಲಕವೆ ‘ನಲ್ಲಿಯಲ್ಲಿದ್ದ ನೀರು ಕುಡಿಯಿರಿʼ ಎಂದು ತಿಳಿಸಿದ್ದಾರೆ.
ಸ್ವಲ್ಪ ಸಮಯದ ನಂತರ ವೃದ್ಧೆ ಹಿತ್ತಲ ಬಾಗಿಲು ತೆಗೆದು ನೋಡಿದರು
ಮೂವರು ಅಪರಿಚಿತರು ಅಲ್ಲೇ ಮರೆಯಾಗಿ ನಿಂತಿದ್ದರು. ಕೆಲವು ನಿಮಿಷದ ಬಳಿಕ ಅನುಮಾನಗೊಂಡ ವೃದ್ಧೆ ಹಿತ್ತಲ ಬಾಗಿಲು ತೆರೆದು ಪರಿಶೀಲಿಸಲು ಮುಂದಾಗಿದ್ದಾರೆ. ಆಗ ಮೂವರು ಒಮ್ಮೆಲೆ ಮನೆಯೊಳಗೆ ನುಗ್ಗಿದ್ದಾರೆ.!
ಒಳ ನುಗ್ಗಿದ ದರೋಡೆಕೋರರು ವಿಶಾಲಾಕ್ಷಿ ಅವರ ಬಾಯಿಯನ್ನು ಒತ್ತಿ ಹಿಡಿದು ಬೆದರಿಸಿದ್ದರಂತೆ ಬಳಿಕ ಅವರ ಕೈಗಳನ್ನು ಸೀರೆಯಿಂದ ಕಟ್ಟಿ ಹಾಕಿ, ಬಾಯಿಗೆ ಬಟ್ಟೆ ತುರುಕಿ ಅಡುಗೆ ಮನೆಯಲ್ಲಿ ಕೂಡಿ ಹಾಕಿದ್ದರು. ಈ ವೇಳೆ ವೃದ್ಧೆಯ ಮೇಲೆ ಹಲ್ಲೆ ನಡೆಸಿದ್ದರಂತೆ.!
ದರೋಡೆಕೋರರು ಮನೆಯಲ್ಲಿದ್ದ ಬೀರುವನ್ನು ಒಡೆದು ಅದರಲ್ಲಿದ್ದ ಆಭರಣಗಳನ್ನು ದೋಚಿದ್ದಾರೆ. ವಿಶಾಲಾಕ್ಷಿ ಅವರ ಮೈಮೇಲಿದ್ದ ಚಿನ್ನದ ಸರ, ಎರಡು ಕೈಬಳೆ, ಕಿವಿ ಓಲೆ ಸೇರಿದಂತೆ ಒಟ್ಟು 146 ಗ್ರಾಂ ತೂಕದ ವಿವಿಧ ಚಿನ್ನಾಭರಣ ಕಸಿದುಕೊಂಡಿದ್ದಾರೆ. ಇವುಗಳ ಮೌಲ್ಯ ಅಂದಾಜು ₹17.52 ಲಕ್ಷ ಅಂದಾಜಿಸಲಾಗಿತ್ತು. ಇದಲ್ಲದೆ ಬೀರುವಿನಲ್ಲಿದ್ದ ₹50,000 ನಗದು ಹಾಗೂ ಟೇಬಲ್ ಮೇಲಿದ್ದ ಪರ್ಸ್ನಲ್ಲಿದ್ದ ₹1,000 ಹಣ ಮತ್ತು ಒಂದು ಮೊಬೈಲ್ ಫೋನ್ ಅನ್ನು ದೋಚಿದ್ದಾರೆ. ಬಳಿಕ ಹಿತ್ತಲ ಬಾಗಿಲಿನ ಮೂಲಕ ಪರಾರಿಯಾಗಿದ್ದರಂತೆ ದರೋಡೆಕೊರರು.

ದರೋಡೆಕೋರರು ಹೋದ ನಂತರ ವಿಶಾಲಾಕ್ಷಿ ಅವರು ಹೇಗೊ ಕಷ್ಟಪಟ್ಟು ಕೈಕಟ್ಟುಗಳನ್ನು ಬಿಡಿಸಿಕೊಂಡಿದ್ದಾರೆ. ನಂತರ ಚಾಕುವಿನಿಂದ ಬಾಗಿಲಿಗೆ ತೂತು ಮಾಡಿ ಚಿಲಕ ತೆಗೆದು ಹೊರಬಂದಿದ್ದಾರೆ. ಪಕ್ಕದ ಮನೆಯವರಿಗೆ ವಿಷಯ ತಿಳಿಸಿದ ನಂತರ ಅವರ ಸಂಬಂಧಿಕರು ಆಗಮಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇನ್ನೂ ವಿಷಯ ತಿಳಿದು ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ವೃದ್ಧೆ ವಿಶಾಲಾಕ್ಷಿ ಮತ್ತು ಅವರ ಸಂಬಂಧಿಕರನ್ನ ಭೇಟಿಯಾಗಿ ಘಟನೆ ಕುರಿತು ಸಂಪೂರ್ಣ ಮಾಹಿತಿ ಪಡೆದಿದ್ದರು. ಈ ಸಂದರ್ಭ ತೀರ್ಥಹಳ್ಳಿ ಮತ್ತು ಆಗುಂಬೆ ಠಾಣೆಯ ಪೊಲೀಸ್ ಅಧಿಕಾರಿಗಳು ಜೋತೆಗಿದ್ದರು.

ಪೊಲೀಸರ ಕಾರ್ಯಚರಣೆ :
ತಕ್ಷಣವೇ ಕಾರ್ಯಚರಣೆಗೆ ಇಳಿದ ಪೊಲೀಸರ ತಂಡ ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್ ಐಪಿಎಸ್ ಅವರ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ರಾಜಶೇಖರ್ ನೇತ್ರುತ್ವದಲ್ಲಿ ಆಗುಂಬೆ ಠಾಣೆಯ ಖಡಕ್ ಪಿಎಸ್ಐ ಶಿವನಗೌಡ ಮಾಳೂರು ಪಿಎಸ್ಐ ಸುನೀಲ್ ಮತ್ತು ಪೊಲೀಸರ ತಂಡ ದರೋಡೆ ಕೋರರ ಬೆನ್ನಿಗೆ ಬಿದ್ದಿದ್ದರು.

ಆರೋಪಿಗಳ ಬಂಧನ :
ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು.ಆರೋಪಿಗಳಾದ
ಎ1. ಭರತ್.ವೈ @ ಭಟ್ಟ ತಂದೆ ಯಶವಂತರಾವ್, 25 ವರ್ಷ, ಮರಾಠಿ ಜನಾಂಗ, ಚಾಲಕ ವೃತ್ತಿ, ವಾಸ ಜೇಡಿಕಟ್ಟೆ, ಹೊಸೂರು, ತವಲಗುಂದಿ ಪೋಸ್ಟ್, ಭದ್ರಾವತಿ (ತಾ),
2) ಅಶೋಕ ತಂದೆ ಪೆರುಮಾಳ್, 28 ವರ್ಷ, ಪೆಂಟಿಂಗ್ ಕೆಲಸ, ತಮಿಳು ಮೊದಲಿಯಾರ್ , ಜನಾಂಗ, ಜಾವಳ್ಳಿ ಗ್ರಾಮ, ಶಿವಮೊಗ್ಗ,
3) ಮಹಮ್ಮದ್ ಇಬ್ರಾಹಿಂ ಮೀರಾ @ ಟಕ್ಕರ್ ತಂದೆ ಹಸನಬ್ಬ ಬ್ಯಾರಿ, 24 ವರ್ಷ, ಮುಸ್ಲಿಂ ಜನಾಂಗ, ವಾಸ ವೀರಾಪುರ, ಭದ್ರಾಕಾಲೋನಿ, ಭದ್ರಾವತಿ (ತಾ)
4) ಪಾರ್ತಿಪ್ ತಂದೆ ದೊರೆಸ್ವಾಮಿ, 25 ವರ್ಷ, ವಡ್ಡಭೋವಿ ಜಾತಿ, ಚಾಲಕ ವೃತ್ತಿ, ವಾಸ ಮೇಲಿನ ಕುರುವಳ್ಳಿ. ತೀರ್ಥಹಳ್ಳಿ (ತಾ) ನಾಲ್ವರು ದರೋಡೆ ಕೋರರನ್ನು ಬಂಧಿಸಿ ದರೋಡೆ ಮಾಡಿದ್ದ ವಸ್ತುಗಳಾದ 70 ಗ್ರಾಂ ಬಂಗಾರದ ಆಭರಣಗಳು. ಅಂದಾಜು ಮೌಲ್ಯ 10 ಲಕ್ಷ 80,000/-ರೂಗಳು,
56 ಗ್ರಾಂ ಬೆಳ್ಳಿ ವಸ್ತುಗಳ, ಅಂದಾಜು ಮೌಲ್ಯ 16,700/-ರೂಗಳು ಮತ್ತು ಕೃತ್ಯಕ್ಕೆ ಬಳಸಿದ KA66E7415 Access ಬಿಳಿ ಬಣ್ಣದ ಸ್ಕೂಟಿ ಅಂದಾಜು ಮೌಲ್ಯ 50,000/-ರೂಗಳು,
ಕೃತ್ಯಕ್ಕೆ ಬಳಸಿದ KA14EU3566 Honda Activa ಬೂದು ಬಣ್ಣದ ಸ್ಕೂಟರ್ ಅಂದಾಜು ಮೌಲ್ಯ 50,000/-,
ಒಟ್ಟು 11 ಲಕ್ಷ 96700/- ರೂಗಳ ಮಾಲನ್ನು ಪೊಲೀಸರು ವಶಪಡಿಸಿಕೊಂಡಿರುತ್ತಾರೆ. ಪೊಲೀಸರ ತನಿಖಾ ತಂಡದಲ್ಲಿ ಅರವಿಂದ ಕಲಗುಜ್ಜಿ, ಪೊಲೀಸ್ ಉಪಾಧೀಕ್ಷಕರು ತೀರ್ಥಹಳ್ಳಿ ಉಪವಿಭಾಗ ರವರ ಮಾರ್ಗದರ್ಶನದಲ್ಲಿ ಮಾಳೂರು ಸರ್ಕಲ್ ಇನ್ಸ್ ಪೆಕ್ಟರ್ ರಾಜಶೇಖರ್.ಎಲ್, ಆಗುಂಬೆ ಪೊಲೀಸ್ ಠಾಣೆಯ ಪಿ.ಎಸ್.ಐ ಶಿವನಗೌಡ, ಮಾಳೂರು ಪಿ.ಐ.ಎಸ್ ಸುನಿಲ್, ಎ.ಎಸ್.ಐ ಉಮೇಶ್ ನಾಯ್.ಸಿ ಎ.ಎಸ್.ಐ ರಂಗನಾಥ್ ಸಿಬ್ಬಂದಿಯವರಾದ ಲಿಂಗೇಗೌಡ, ಸುರಕ್ಷಿತ್, ಕಿರಣ್ ಕುಮಾರ, ಕುಮಾರ್ ಜೋಸೆಫ್ ಮ್ಯಾಥ್ಯು, ಸುರೇಶ್ ನಾಯ್ಕ, ಜಯಕುಮಾರ್, ರಮೇಶ ಅಕ್ಕಸಾಲಿ, ವಿನಯ್ ಕುಮಾರ್. ಉಲ್ಲಾಸ್ ನಾಯ್ಕ, ಪ್ರಶಾಂತ. ಅನಿಲ್, ನಾಗಾರ್ಜುನ್, ವಿಶ್ವನಾಥ, ಸುನಿಲ್, ರವಿ.ಹೆಚ್.ಸಿ. ಅರವಿಂದ, ಚಾಲಕರಾದ ಅವಿನಾಶ, ತಾಂತ್ರಿಕ ವಿಭಾಗದ ಸಿಬ್ಬಂದಿಯವರಾದ ಗುರುರಾಜ್ ಮತ್ತು ಇಂದ್ರೇಶ ರವರುಗಳು ಇದ್ದು, ಸದರಿ ಪ್ರಕರಣವನ್ನು ಪತ್ತೆ ಹಚ್ಚಿ ಆರೋಪಿ ಮತ್ತು ಮಾಲು ಪತ್ತೆ ಮಾಡಿರುತ್ತಾರೆ. ಸದರಿ ಪ್ರಕರಣ ಪತ್ತೆಹಚ್ಚಿದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮಾನ್ಯ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ ಐಪಿಎಸ್ ಅವರು ಪ್ರಶಂಶಿಸಿರುತ್ತಾರೆ.


