
ಬೆಂಗಳೂರು : CLP ಸಭೆಯಲ್ಲೇ ಸಿಎಂ ಆಯ್ಕೆಯಾಗಲಿ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ: ಸಹಿ ಸಂಗ್ರಹಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ ಬಣ.!
news.ashwasurya.in
ಅಶ್ವಸೂರ್ಯ/ಬೆಂಗಳೂರು: ರಾಜೀನಾಮೆ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರ ಬಣ ತೀವ್ರ ಒತ್ತಡ ಹೇರಿದೆ. ಮುಂದಿನ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಆಗಬೇಕು ಎಂದು ಶಾಸಕಾಂಗ ಸಭೆಯಲ್ಲಿ ಒತ್ತಾಯಿಸಲು ಕೆಲವು ಶಾಸಕರು ತಯಾರಿ ನಡೆಸಿದ್ದಾರೆ. ತಮ್ಮ ಬಣದಿಂದ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಕಣಕ್ಕಿಳಿಸುವ ಚಿಂತನೆಯಲ್ಲಿದ್ದಾರೆ.
ಸಿದ್ದರಾಮಯ್ಯ ಅವರ ಆಪ್ತ ಸಚಿವರು, ನಾಯಕರು ರಾಜೀನಾಮೆ ನೀಡುವುನ್ನು ತಡೆಯಲು ಒತ್ತಡ ಹೇರಿದ್ದು ಅಗತ್ಯವಾದರೆ ಶಾಸಕರ ಸಹಿ ಸಂಗ್ರಹಿಸೋಣ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಒಪ್ಪದ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಸಹಿ ಸಂಗ್ರಹದಂತಹ ಪ್ರಯತ್ನ ಮಾಡದಂತೆ ಬೆಂಬಲಿಗರಿಗೆ ತಾಕೀತು ಮಾಡಿದ್ದಾರೆ.

ಬುಧವಾರ ಹಿರಿಯ ಸಚಿವರು ಶಾಸಕರೊಂದಿಗೆ ಚರ್ಚೆ ನಡೆಸಿದ ಸಿಎಂ ಸಹಿ ಸಂಗ್ರಹಿಸದಂತೆ ತಿಳಿಸಿದ್ದಾರೆ. ರಾಹುಲ್ ಗಾಂಧಿ ಸೂಚನೆಯಂತೆ ರಾಜೀನಾಮೆ ನೀಡುತ್ತೇನೆ. ನನ್ನ ನಿರ್ಧಾರದಲ್ಲಿ ಬದಲಾವಣೆ ಇಲ್ಲ. ಒಂದು ವೇಳೆ ನೀವು ಹೈಕಮಾಂಡ್ ಬಳಿಗೆ ಹೋಗುವುದಾದರೆ ನಾನು ರಾಜೀನಾಮೆ ನೀಡಿದ ನಂತರ ಹೋಗಿ, ನಿಮ್ಮ ಅಭಿಪ್ರಾಯ ತಿಳಿಸಿ. ನಾನು ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಆಪ್ತರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.


