
ಬೆಂಗಳೂರು : ಜೂನ್ 1 ರಂದು ಮುಖ್ಯಮಂತ್ರಿಯಾಗಿ ಡಿಕೆ ಪ್ರಮಾಣ ವಚನ. ಇಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ರಾಜೀನಾಮೆ!
news.ashwasurya.in
ಅಶ್ವಸೂರ್ಯ/ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಗುರುವಾರ ರಾಜೀನಾಮೆ ನೀಡಲಿದ್ದಾರೆ.
ಸಿಎಂ ನಿವಾಸ ಕಾವೇರಿಯಲ್ಲಿ ಸಚಿವರ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದ್ದು, ಮಂತ್ರಿ ಮಂಡಲದ ಸದಸ್ಯರಿಗೆ ಸಿದ್ದರಾಮಯ್ಯ ತಮ್ಮ ತೀರ್ಮಾನ ತಿಳಿಸಲಿದ್ದಾರೆ. ಮಧ್ಯಾಹ್ನ ಲೋಕಭವನಕ್ಕೆ ಭೇಟಿ ನೀಡಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ. ಡಿಸಿಎಂ ಸಹಿತ ಸಚಿವರೊಂದಿಗೆ ರಾಜ್ಯಪಾಲರ ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ.

ಶುಕ್ರವಾರ ಸಿ.ಎಲ್.ಪಿ. ಸಭೆಯಲ್ಲಿ ಶಾಸಕಾಂಗ ನಾಯಕನ ಆಯ್ಕೆ ನಡೆಯಲಿದೆ. ಸಿದ್ದರಾಮಯ್ಯ ಅವರಿಂದ ಡಿ.ಕೆ. ಶಿವಕುಮಾರ್ ಹೆಸರು ಸೂಚಿಸಲಾಗುವುದು. ಹಿರಿಯ ಶಾಸಕರಿಂದ ಅನುಮೋದನೆ ಸಿಗಲಿದ್ದು, ನಂತರ ಸಿದ್ದರಾಮಯ್ಯ ಶಾಸಕರು, ಪಕ್ಷಕ್ಕೆ ಧನ್ಯವಾದ ಸಲ್ಲಿಸಲ್ಲಿದ್ದಾರೆ. ನೂತನ ನಾಯಕನಿಂದ ಸಿದ್ದರಾಮಯ್ಯ ಅವರಿಗೆ ಗೌರವ ಸಲ್ಲಿಕೆ ಆಗಲಿದೆ.
ಇಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಲಿದ್ದಾರೆ. ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೂನ್ 1ರ ಸೋಮವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಅಂದು ಒಳ್ಳೆಯ ಮುಹೂರ್ತ ಇದೆ ಎನ್ನಲಾಗಿದೆ.
ಶಾಸಕಾಂಗ ನಾಯಕನಾಗಿ ಆಯ್ಕೆಯಾದ ನಂತರ ಡಿ.ಕೆ. ಶಿವಕುಮಾರ್ ಅವರು ನೊಣವಿನಕೆರೆಗೆ ಭೇಟಿ ನೀಡಲಿದ್ದಾರೆ. ನೊಣವಿನಕೆರೆ ಅಜ್ಜಯ್ಯನ ಪೀಠಕ್ಕೆ ಭೇಟಿ ನೀಡಿ ಗದ್ದುಗೆ ದರ್ಶನ ಪಡೆದು ಅಪ್ಪಣೆಯಂತೆ ಶುಭ ಮುಹೂರ್ತದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.


