
ಉಪಮುಖ್ಯಮಂತ್ರಿ ರೇಸ್ನಲ್ಲಿದ್ದ ಘಟಾನುಘಟಿಗಳಿಗೆ ಬಿಗ್ ಶಾಕ್ ಡಿಕೆಶಿ ಕ್ಯಾಬಿನೆಟ್ನಲ್ಲಿ ಜಿ.ಪರಮೇಶ್ವರ್ ಒಬ್ಬರೆ ಡೆಪ್ಯುಟಿ ಸಿಎಂ.!
news.ashwasurya.in
ಅಶ್ವಸೂರ್ಯ/ ಬೆಂಗಳೂರು : ಆರು ತಿಂಗಳಿಂದ ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಆಡಳಿತ ಹಸ್ತಾಂತರದ ಹೈ-ಡ್ರಾಮಾಕ್ಕೆ ಇಂದು (ಜೂನ್ 3) ಸಂಜೆ 4:05ಕ್ಕೆ ಅಧಿಕೃತವಾಗಿ ತೆರೆಬೀಳಲಿದೆ. ನಿಯೋಜಿತ ಮುಖ್ಯಮಂತ್ರಿ, ಕಾಂಗ್ರೆಸ್ನ ಟ್ರಬಲ್ ಶೂಟರ್ ಕನಕಪುರದ ಬಂಡೆ ಎಂದೆ ಖ್ಯಾತಿಗಳಿಸಿರುವ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಆದರೆ ಈ ಪಟ್ಟಾಭಿಷೇಕದ ಬೆನ್ನಲ್ಲೇ ರಾಜ್ಯ ರಾಜಕಾರಣದ ಅತ್ಯಂತ ದೊಡ್ಡ ಬಿಗ್ ಟ್ವಿಸ್ಟ್ ಒಂದು ಹೊರಬಿದ್ದಿದೆ ಆರಂಭದಲ್ಲಿ ಕೇವಲ ಮುಖ್ಯಮಂತ್ರಿ ಹುದ್ದೆಯನ್ನಷ್ಟೇ ಸೃಷ್ಟಿಸಲು ಯೋಚಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಕೊನೆಗೂ ಪಕ್ಷದ ಒಗ್ಗಟ್ಟು ಮತ್ತು ದಲಿತ ಸಮುದಾಯದ ಪ್ರಾತಿನಿಧ್ಯವನ್ನು ಸರಿ ದೂಗಿಸಲು ಒಬ್ಬರನ್ನೆ ಡಿಸಿಎಂ ಮಾಡಲು ಮುಂದಾಗಿದ್ದಾರೆ. ಅದರಂತೆ ತುಮಕೂರಿನ ಕೊರಟಗೆರೆ ಶಾಸಕ, ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರು ಕರ್ನಾಟಕದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಡಿಕೆಶಿ ಜೊತೆ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ.
ಪರಮೇಶ್ವರ್ಗೆ ಡಿಸಿಎಂ ಪಟ್ಟ: ತೆರೆಮರೆಯಲ್ಲಿದೆ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್
ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಸಚಿವರ ಸಂಭಾವ್ಯ ಪಟ್ಟಿಗಳನ್ನೆಲ್ಲಾ ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ನಿರಾಕರಿಸಿದ್ದರೂ, ದೆಹಲಿ ಮೂಲಗಳ ಪ್ರಕಾರ ಡಾ.ಜಿ.ಪರಮೇಶ್ವರ್ ಅವರಿಗೆ ಡೆಪ್ಯುಟಿ ಸಿಎಂ ಹುದ್ದೆ ಒಲಿದು ಬಂದಿರುವುದು ಪಕ್ಕಾ ಆಗಿದೆ. ಇದರ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪ್ರಬಲವಾದ ಸಪೋರ್ಟ್ ಇದೆ ಎನ್ನಲಾಗಿದೆ.
ಸತತ 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ ಹಾಗೂ ರಾಜ್ಯದ ಅತ್ಯಂತ ಪ್ರಭಾವಿ ದಲಿತ ನಾಯಕರಾಗಿರುವ ಪರಮೇಶ್ವರ್ ಅವರಿಗೆ ಗೌರವಯುತ ಸ್ಥಾನ ಸಿಗಲೇಬೇಕು ಎಂದು ಸಿದ್ದರಾಮಯ್ಯ ಹೈಕಮಾಂಡ್ ಮುಂದೆ ಪ್ರಬಲವಾಗಿ ಪ್ರತಿಪಾದಿಸಿದ್ದರು.
ಡಿಸಿಎಂ ರೇಸ್ನಲ್ಲಿ ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ ಹಾಗೂ ಜಮೀರ್ ಅಹ್ಮದ್ ಖಾನ್ ಅವರ ಹೆಸರುಗಳಿದ್ದರೂ, ರಾಜ್ಯದಲ್ಲಿ ಅಧಿಕಾರದ ಹಲವು ಕೇಂದ್ರಗಳು ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ರಾಹುಲ್ ಗಾಂಧಿ ಅವರು ಕೇವಲ ಪರಮೇಶ್ವರ್ ಅವರ ಹೆಸರನ್ನು ಮಾತ್ರ ಫೈನಲ್ ಮಾಡಿದ್ದಾರೆ. ಆ ಮೂಲಕ ಡಿಕೆಶಿ ಕ್ಯಾಬಿನೆಟ್ನಲ್ಲಿ ಪರಮೇಶ್ವರ್ ಉಪ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ.
ಮಠಾಧೀಶರ ಒತ್ತಡ ಹಾಗೂ ಜನಾಭಿಪ್ರಾಯಕ್ಕೆ ಮಣಿದ ವರಿಷ್ಠರು ಸಿಎಂ ರೇಸ್ನಲ್ಲಿದ್ದ ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ತಪ್ಪಿದ್ದಕ್ಕೆ ದಲಿತ ಸಮುದಾಯ ಹಾಗೂ ವಿವಿಧ ಮಠಾಧೀಶರಲ್ಲಿ ಕೊಂಚ ಅಸಮಾಧಾನವಿತ್ತು. “ಒಂದು ವೇಳೆ ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ಬಂದರೆ ನಮ್ಮ ಬೆಂಬಲ ಪರಮೇಶ್ವರ್ ಅವರಿಗೆ, ಎಂದು ಈ ಹಿಂದೆ ಕೆ.ಎನ್. ರಾಜಣ್ಣ ಅವರಂತಹ ಆಪ್ತರು ಬಹಿರಂಗವಾಗಿಯೇ ಹೇಳಿದ್ದರೂ. ಈಗ ಈ ಎಲ್ಲಾ ಜನಾಭಿಪ್ರಾಯ ಮತ್ತು ಅಭಿಮಾನಿ ಬಳಗದ ಒತ್ತಡಕ್ಕೆ ಕಾಂಗ್ರೆಸ್ ವರಿಷ್ಠರು ಮನ್ನಣೆ ನೀಡಿದ್ದಾರೆ.

ಅಂದಹಾಗೆ, ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ಹೊಸದೇನಲ್ಲ. ಈ ಹಿಂದೆ ಜೆಡಿಎಸ್-ಕಾಂಗ್ರೆಸ್ ಮೈತ್ರಿಯ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲೂ ಹಾಗೂ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಗೃಹ ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ದೊಡ್ಡ ಅನುಭವ ಇವರಿಗಿದೆ.
ಇನ್ನೊಂದೆಡೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ಲೋಕಭವನ ಕಂಪ್ಲೀಟ್ ಆಗಿ ಬ್ಯಾನರ್, ಬಂಟಿಂಗ್ಸ್ಗಳಿಂದ ನವವಧುವಿನಂತೆ ಕಂಗೊಳಿಸುತ್ತಿದೆ. ಈ ಭವ್ಯ ಸಮಾರಂಭದಲ್ಲಿ ಭಾಗಿಯಾಗಲು ಕೇರಳದ ಹಿರಿಯ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದು, ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹಾಗೂ ಎಐಸಿಸಿ ಮುಖಂಡರು ಕೆಲವೇ ಕ್ಷಣಗಳಲ್ಲಿ ಲ್ಯಾಂಡ್ ಆಗಲಿದ್ದಾರೆ.


