ಬೆಂಗಳೂರು : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ.!ಹೊಸ ಸರ್ಕಾರದ ಮೊದಲ ವಿಕೆಟ್ ಪತನ.!?
news.ashwasurya.in
ಖಾತೆ ಹಂಚಿಕೆಯಾದ ಕ್ಷಣದಿಂದಲೇ ಬೇಸರಗೊಂಡಿರುವ ಸಚಿವ ರಾಮಲಿಂಗಾ ರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನನಗೆ ಕೊಡುತ್ತೇನೆ ಎಂದು ಹೇಳಿ ಕಿತ್ತುಕೊಂಡಿದ್ದಾರೆ. ಇದು ನನಗೆ ತೀವ್ರ ಬೇಸರ ತರಿಸಿದೆ. ಯಾವುದೇ ಮಾತುಕತೆಗೆ ನಾನು ಮಣಿಯುವುದಿಲ್ಲ ಎಂದಿದ್ದಾರೆ…
ಅಶ್ವಸೂರ್ಯ/ಬೆಂಗಳೂರು : ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಾಗಲ್ಲ. ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತು ಕೊಟ್ಟಿದ್ದರು. ಖಾತೆ ವಿಚಾರವಾಗಿ ಅಲ್ಲ, ನನಗೆ ತೀವ್ರ ಬೇಸರವಾಗಿದೆ. ಎಷ್ಟು ಎಂದು ನಾನು ಸಹಿಸಿಕೊಳ್ಳಲಿ. ಹೀಗಾಗಿ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಮಲಿಂಗಾ ರೆಡ್ಡಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದಲ್ಲಿ ಖಾತೆ ಹಂಚಿಕೆಯಾದ ಮರುದಿನವೇ ವಿಕೆಟ್ ಪತನಗೊಂಡಿದೆ. ನಾನು ಖಾತೆಗಾಗಿ ರಾಜೀನಾಮೆ ಕೊಡ್ತಾಯಿಲ್ಲ ಎಂದು ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಯಾಕೆ ರಾಜೀನಾಮೆ ಕೊಡ್ತಾಯಿದ್ದೇನೆ ಅಂತಾ ಮಾಧ್ಯಮದ ಮುಂದೆ ಬಂದು ಹೇಳ್ತಾಯಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ನಾನು ಯಾರ ಬಳಿಯೂ ಮಾತನಾಡಿಲ್ಲ. ನನ್ನ ಮನೆಯಲ್ಲೂ ಯಾರಿಗೂ ಗೊತ್ತಿಲ್ಲ. ಈ ವಿಚಾರದಲ್ಲಿ ಚರ್ಚೆಯ ಅವಶ್ಯಕತೆ ಇಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಶಾಸಕನಾಗಿ ಮುಂದುವರೆಯುತ್ತೇನೆ
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಆದರೆ ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ. ಶಾಸಕನಾಗಿ ಕೆಲಸ ಮಾಡುತ್ತೇನೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಮೊನ್ನೆ ಕೂಡ ಪ್ರಮಾಣ ವಚನಕ್ಕೂ ಮುನ್ನ ಡಿಕೆಶಿ ಅವರನ್ನ ಭೇಟಿಯಾಗಿದ್ದೆ. ಆಗಲೂ ಕೂಡಾ ಬೆಂಗಳೂರು ನಗರಾಭಿವೃದ್ಧಿ ನಿನ್ನಗೆ ಕೊಡ್ತೇನೆ ಎಂದಿದ್ದರು. ಆದರೀಗ ಜಲಸಂಪನ್ಮೂಲ ಕೊಟ್ಟಿದ್ದಾರೆ ನಮ್ಮ ಆತ್ಮಸಾಕ್ಷಿಯಾಗಿ ಕೆಲಸ ಮಾಡಲು ಆಗಲ್ಲ. ಹೀಗಾಗಿ ರಾಜೀನಾಮೆ ನೀಡ್ತಾಯಿದ್ದೇನೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಕೈಯಲ್ಲಿ ಹೋಗಿ ರಾಜೀನಾಮೆ ಕೊಟ್ಟಬರಲು ನನ್ನಗೆ ಇಷ್ಟ ಇಲ್ಲ. ಸಿಎಂ ಕಾರ್ಯದರ್ಶಿ ತುಷಾರ್ ಗಿರಿನಾಥ್ ಗೆ ನಮ್ಮ ಆಫೀಸ್ ನವರು ಕೊಟ್ಟು ಬರ್ತಾರೆ ಎಂದಿದ್ದಾರೆ.
ಸಚಿವ ರಾಮಲಿಂಗ ರೆಡ್ಡಿ ರಾಜಿನಾಮೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದು ಏನು.?

ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ರಾಮಲಿಂಗ ರೆಡ್ಡಿ ನೆಡೆದುಬಂದ ಹಾದಿ…
ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರು ತಮಗೆ ಹಂಚಿಕೆಯಾದ ಜಲಸಂಪನ್ಮೂಲ ಖಾತೆಗೆ [Ramalinga Reddy] ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ [Prajavani] ಸಲ್ಲಿಸಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ನಿರೀಕ್ಷಿಸಿದ್ದ ಅವರಿಗೆ ಸಿಎಂ ಡಿ.ಕೆ. ಶಿವಕುಮಾರ್ ಜಲಸಂಪನ್ಮೂಲ ಇಲಾಖೆ ನೀಡಿದ್ದರಿಂದ ಬೇಸರಗೊಂಡು ತಮ್ಮ ನಿರ್ಧಾರವನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ.
ಹಿರಿಯ ರಾಜಕಾರಣಿಯಾಗಿರುವ ರಾಮಲಿಂಗಾರೆಡ್ಡಿ ಅವರು ಸುಮಾರು 4 ದಶಕಗಳ ಕಾಲ ರಾಜ್ಯ ರಾಜಕಾರಣದಲ್ಲಿ [Ramalinga Reddy] ಸಕ್ರಿಯರಾಗಿದ್ದಾರೆ. ಅವರು ಈ ಹಿಂದೆ ಸಾರಿಗೆ ಸಚಿವರಾಗಿ, ಗೃಹ ಸಚಿವರಾಗಿ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ [Wikipedia] ಕೂಡಾ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದಾರೆ.
ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ನಿರ್ಧಾರ ಅಥವಾ ಇಲಾಖಾ ಬದಲಾವಣೆಗಳ ಕುರಿತಾದ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಕುರಿತು ನಿಮಗೆ ಇನ್ನಷ್ಟು ವಿವರಗಳು ಬೇಕಿದ್ದರೆ ದಯವಿಟ್ಟು ತಿಳಿಸಿ.

