ಬೆಂಗಳೂರು : ಆರೋಪಿ ಬಳಿ ಹಣಕ್ಕೆ ಬೇಡಿಕೆ.! ಜೈಪುರದಲ್ಲಿ ಎಸಿಬಿ ಬಲೆಗೆ ಬಿದ್ದ ಬೆಂಗಳೂರು ಪೊಲೀಸರು!
ರಕ್ಷಕರೇ ಭಕ್ಷಕರಾದ್ರೆ ಕಾನೂನಿನ ಕಥೆ ಏನು.? ಆರೋಪಿಗಳನ್ನ ಬಂಧಿಸಿ ಶಿಕ್ಷೆ ಕೊಡಿಸುವ ಪಣ ತೊಟ್ಟು ಖಾಕಿ ಧರಿಸಿದ ಪೊಲೀಸರೇ ಕ್ರಿಮಿನಲ್ಸ್ ಬಳಿ ಹಣಕ್ಕೆ ಬೇಡಿಕೆಯಿಟ್ಟಿರುವ ಘಟನೆ ನಡೆದಿದೆ. ಹಣ ಪಡೆಯುತ್ತಿದ್ದ ವೇಳೆ ಬೆಂಗಳೂರು ಪೊಲೀಸರು (Bengaluru Police) ಜೈಪುರದಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ವರದಕ್ಷಿಣೆ ಪ್ರಕರಣದಲ್ಲಿ ಆರೋಪಿ ಬಂಧನಕ್ಕೆ ತೆರಳಿದ್ದ ಎಚ್ಎಎಲ್ ಪೊಲೀಸರು (Police) ಆರೋಪಿ ಬಳಿಯೇ ಹಣಕ್ಕೆ ಬೇಡಿಕೆ ಇಟ್ಟು ಟ್ರ್ಯಾಪ್ ಆಗಿದ್ದಾರೆ…
news.ashwasurya.in
ಅಶ್ವಸೂರ್ಯ/ಬೆಂಗಳೂರು: ವರದಕ್ಷಿಣೆ ಪ್ರಕರಣದಲ್ಲಿ ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಹೆಚ್ಎಎಲ್ ಪೊಲೀಸರು (Bengaluru HAL Police) ಜೈಪುರದಲ್ಲಿ ಟ್ರ್ಯಾಪ್ ಆಗಿರುವ ಘಟನೆ ವರದಿಯಾಗಿದೆ.
ಆರೋಪಿಯ (Accused) ಬಂಧನಕ್ಕೆ ತೆರಳಿದ್ದ ಪೊಲೀಸರು, ಆತನ ಬಳಿ ಹಣಕ್ಕೆ ಬೇಡಿಕೆಯಿಟ್ಟು ರಾಜಸ್ಥಾನದ ಎಸಿಬಿ ಅಧಿಕಾರಿಗಳಿಗೆ ಖೆಡ್ಡಕ್ಕೆ ಬಿದ್ದಿದ್ದಾರೆ.
ಪಿಎಸ್ಐ ಅನಿತಾ, ಹೆಡ್ ಕಾನ್ಸ್ಟೇಬಲ್ ಉಳುವಪ್ಪ, ಕಾನ್ಸ್ಟೇಬಲ್ ಯತೀಶ್ ಟ್ರ್ಯಾಪ್ ಆದ ಪೊಲೀಸರು.
ವರದಕ್ಷಿಣೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಶುಕ್ರವಾರ ಆರೋಪಿ ಬಂಧನಕ್ಕೆ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದರು.

ಈ ವೇಳೆ ಸಿಕ್ಕ ಆರೋಪಿ ಬಳಿ 2 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಆದ್ರೆ ಆರೋಪಿ ಸಾಧ್ಯವಾದಷ್ಟು ಹಣ ಕೊಡುವುದಾಗಿ ಹೇಳಿದ್ದ. ಜೈಪುರದ ಗಂಗೌರ್ನ ಹೋಟೆಲ್ವೊಂದರಲ್ಲಿ 40,000 ರೂ. ಹಣ ಪಡೆಯುವಾಗ ಎಸಿಬಿ ಅಧಿಕಾರಿಗಳಿಗೆ ಲಾಕ್ ಆಗಿದ್ದಾರೆ.
ಸದ್ಯ ಹೆಚ್ಎಎಲ್ ಪೊಲೀಸರನ್ನೇ ಬಂಧಿಸಿರುವ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎನ್ನುವುದು ತಿಳಿದುಬಂದಿದೆ.
ಇಲ್ಲಿ ಗಮನಿಸ ಬೇಕಾಗಿರುವುದು ಆರೋಪಿ ಏನಾದರೂ ಗೇಮ್ ಮಾಡಿ ಬೆಂಗಳೂರು ಪೊಲೀಸರನ್ನು ಖೆಡ್ಡಕ್ಕೆ ಬಿಳುವಂತೆ ಮಾಡಿದ್ನಾ.?ಹೊರ ರಾಜ್ಯಕ್ಕೆ ತೆರಳಿದ ವೇಳೆ ಎಚ್ಚರಿಕೆ ವಹಿಸಬೇಕಾದ ಪೊಲೀಸರು ಎಡವಿದ್ದು ಯಾಕೆ.? ಎಲ್ಲವೂ ನಿಗೂಢವಾಗಿದೆ.!


