Headlines

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ : ₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಸೇಲ್.! ಬಿಜೆಪಿ ಮುಖಂಡನ ಬಂಧನ.!.

ಅರ್ಹ ಅಭ್ಯರ್ಥಿಗಳಿಗೆ ದ್ರೋಹ ಬಗೆದು ಕೋಟ್ಯಂತರ ರೂಪಾಯಿ ಲೂಟಿ ಮಾಡಲು ಆರೋಪಿಗಳು ಭಾರಿ ಸಂಚು ರೂಪಿಸಿದ್ದರು. ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರಿಂದ ರಹಸ್ಯವಾಗಿ ಪ್ರಶ್ನೆಪತ್ರಿಕೆಯನ್ನ ಪಡೆದುಕೊಂಡಿದ್ದ ಬಸವರಾಜ್ ಕನ್ನಾಳೆ, ಅದನ್ನು ಅಭ್ಯರ್ಥಿಗಳಿಗೆ ತಲಾ 40 ಲಕ್ಷ ರೂಪಾಯಿಗಳಂತೆ ಮಾರಾಟ ಮಾಡಿದ್ದ. ಹುದ್ದೆಯ ಆಸೆಗೆ ಬಿದ್ದ ಹಲವು ಅಭ್ಯರ್ಥಿಗಳು ಈತನಿಗೆ ಹಣ ನೀಡಿ ಪ್ರಶ್ನೆಪತ್ರಿಕೆ ಖರೀದಿಸಿದ್ದರು ಎನ್ನುವ ವಿಚಾರ ಸಿಐಡಿ ವಿಚಾರಣೆ ವೇಳೆ ಬಯಲಾಗಿದೆ.

ಕೇವಲ ಪ್ರಶ್ನೆಪತ್ರಿಕೆ ಸೋರಿಕೆ ಮಾತ್ರವಲ್ಲದೆ, ತಮ್ಮ ಕೃತ್ಯ ಯಾರಿಗೂ ತಿಳಿಯಬಾರದು ಎಂಬ ಕಾರಣಕ್ಕೆ ಆರೋಪಿಗಳು ಸಾಕ್ಷ್ಯ ನಾಶಕ್ಕೂ ವ್ಯವಸ್ಥಿತವಾಗಿ ಯತ್ನಿಸಿದ್ದಾರೆ. ಪರೀಕ್ಷೆಯ ನಂತರ ಒಎಂಆರ್ ಶೀಟ್‌ಗಳಲ್ಲಿ ತಿದ್ದುಪಡಿ ಮಾಡುವುದು ಹಾಗೂ ಅಕ್ರಮದ ಸುಳಿವು ಸಿಗದಿರಲು ಸ್ಟ್ರಾಂಗ್ ರೂಮ್‌ನಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನ ಡಿಲೀಟ್‌ ಮಾಡುವ ದುಸ್ಸಾಹಸಕ್ಕೂ ಕೈಹಾಕಲಾಗಿತ್ತು. ತನಿಖೆ ವೇಳೆ ಈ ಎಲ್ಲ ಡಿಜಿಟಲ್ ಹಾಗೂ ಭೌತಿಕ ಸಾಕ್ಷ್ಯಗಳನ್ನು ಸಿಐಡಿ ಅಧಿಕಾರಿಗಳು ಕಲೆಹಾಕಿದ್ದಾರೆ.
ಸೋಮವಾರವಷ್ಟೇ ಬಂಧಿತ ಇಬ್ಬರು ಆರೋಪಿಗಳನ್ನ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಸೆಪ್ಟೆಂಬರ್ 9ರವರೆಗೆ ಇಬ್ಬರನ್ನೂ ಸಿಐಡಿ ಕಸ್ಟಡಿಗೆ ಒಪ್ಪಿಸಿದೆ. ಈ ಭಾರಿ ಹಗರಣದಲ್ಲಿ ಇನ್ನೂ ಯಾರ್ಯಾರು ಶಾಮೀಲಾಗಿದ್ದಾರೆ, ಎಷ್ಟು ಅಭ್ಯರ್ಥಿಗಳು ಹಣ ನೀಡಿ ಪರೀಕ್ಷೆ ಬರೆದಿದ್ದಾರೆ ಎಂಬಿತ್ಯಾದಿ ಸತ್ಯಾಸತ್ಯತೆಗಳು ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಹೊರಬರಬೇಕಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!